<p><strong>ಕೊಚ್ಚಿ: </strong>ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರ ಜಾಮೀನು ಅರ್ಜಿಯನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.</p>.<p>ಎನ್ಐಎ ಅಧಿಕಾರಿಗಳು ಸಲ್ಲಿಸಿದ್ದ ಪ್ರಕರಣದ ಪೂರ್ಣ ವಿವರವನ್ನು ಪರಿಶೀಲಿಸಿದ ನ್ಯಾಯಾಲಯ,’ಈ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿರುವುದು ಎನ್ಐಎ ಅಧಿಕಾರಿಗಳು ನೀಡಿರುವ ಸಾಕ್ಷ್ಯಾಧಾರಗಳಿಂದ ತಿಳಿದುಬಂದಿದೆ. ತನಿಖೆಯನ್ನು ತೀವ್ರಗೊಳಿಸಬೇಕು’ ಎಂದು ತಿಳಿಸಿ, ಸ್ವಪ್ನಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.</p>.<p>’ಯಾವುದೇ ಆಧಾರವಿಲ್ಲದೇ ನನ್ನ ವಿರುದ್ಧ ಕಪೋಕಲ್ಪಿತವಾಗಿ ಆರೋಪಗಳನ್ನು ಮಾಡಲಾಗುತ್ತಿದೆ. ಈ ಪ್ರಕರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರಾಜಕೀಯ ವಿಚಾರವೂ ಸೇರಿಕೊಂಡಿದೆ. ಹೀಗಾಗಿ ನನಗೆ ಜಾಮೀನು ನೀಡಬೇಕೆಂದು’ ಸ್ವಪ್ನಾ ಸುರೇಶ್ ಜಾಮೀನು ಅರ್ಜಿಯಲ್ಲಿ ಮನವಿ ಮಾಡಿದ್ದರು.</p>.<p>ರಾಜತಾಂತ್ರಿಕ ಮಾರ್ಗಗಳನ್ನು ದುರುಪಯೋಗಪಡಿಸಿಕೊಂಡು ದುಬೈನಿಂದ ಭಾರತಕ್ಕೆ ಅಕ್ರಮವಾಗಿ ಚಿನ್ನವನ್ನು ಸಾಗಣೆ ಮಾಡಿದ ಆರೋಪದಡಿ ಸ್ವಪ್ನಾ ಸುರೇಶ್ ಸೇರಿದಂತೆ ಇತರರನ್ನು ಬಂಧಿಸಿ, ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ: </strong>ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರ ಜಾಮೀನು ಅರ್ಜಿಯನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.</p>.<p>ಎನ್ಐಎ ಅಧಿಕಾರಿಗಳು ಸಲ್ಲಿಸಿದ್ದ ಪ್ರಕರಣದ ಪೂರ್ಣ ವಿವರವನ್ನು ಪರಿಶೀಲಿಸಿದ ನ್ಯಾಯಾಲಯ,’ಈ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿರುವುದು ಎನ್ಐಎ ಅಧಿಕಾರಿಗಳು ನೀಡಿರುವ ಸಾಕ್ಷ್ಯಾಧಾರಗಳಿಂದ ತಿಳಿದುಬಂದಿದೆ. ತನಿಖೆಯನ್ನು ತೀವ್ರಗೊಳಿಸಬೇಕು’ ಎಂದು ತಿಳಿಸಿ, ಸ್ವಪ್ನಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.</p>.<p>’ಯಾವುದೇ ಆಧಾರವಿಲ್ಲದೇ ನನ್ನ ವಿರುದ್ಧ ಕಪೋಕಲ್ಪಿತವಾಗಿ ಆರೋಪಗಳನ್ನು ಮಾಡಲಾಗುತ್ತಿದೆ. ಈ ಪ್ರಕರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರಾಜಕೀಯ ವಿಚಾರವೂ ಸೇರಿಕೊಂಡಿದೆ. ಹೀಗಾಗಿ ನನಗೆ ಜಾಮೀನು ನೀಡಬೇಕೆಂದು’ ಸ್ವಪ್ನಾ ಸುರೇಶ್ ಜಾಮೀನು ಅರ್ಜಿಯಲ್ಲಿ ಮನವಿ ಮಾಡಿದ್ದರು.</p>.<p>ರಾಜತಾಂತ್ರಿಕ ಮಾರ್ಗಗಳನ್ನು ದುರುಪಯೋಗಪಡಿಸಿಕೊಂಡು ದುಬೈನಿಂದ ಭಾರತಕ್ಕೆ ಅಕ್ರಮವಾಗಿ ಚಿನ್ನವನ್ನು ಸಾಗಣೆ ಮಾಡಿದ ಆರೋಪದಡಿ ಸ್ವಪ್ನಾ ಸುರೇಶ್ ಸೇರಿದಂತೆ ಇತರರನ್ನು ಬಂಧಿಸಿ, ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>