ಕಳೆದ ತಿಂಗಳು, ನೆಕ್ಸಸ್ನ ತನಿಖೆಯನ್ನು ತೀವ್ರಗೊಳಿಸುವ ಪ್ರಯತ್ನದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಇದೇ ರೀತಿ ದಾಳಿ ನಡೆಸಿತ್ತು. ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಇತರ ರಾಜ್ಯಗಳಲ್ಲಿನ 50ಕ್ಕೂ ಅಧಿಕ ಸ್ಥಳಗಳಲ್ಲಿ ದಾಳಿ ನಡೆಸಿ ದರೋಡೆಕೋರರಿಗೆ ಭಯೋತ್ಪಾದಕರು ಮತ್ತು ಮಾದಕವಸ್ತು ಕಳ್ಳಸಾಗಣೆದಾರರೊಂದಿಗಿನ ಸಂಪರ್ಕದ ಬಗ್ಗೆ ವಿವರಗಳನ್ನು ಪಡೆದಿತ್ತು. ರಾಜಸ್ಥಾನದಲ್ಲಿ, ಚುರುವಿನ ಸಂಪತ್ ನೆಹ್ರಾ ಅವರಿಗೆ ಸೇರಿದ ಸ್ಥಳಗಳಲ್ಲಿ ದಾಳಿ ವರದಿಯಾಗಿದೆ. ಪಂಜಾಬ್ನಲ್ಲಿ, ವಕೀಲ ಗುರುಪ್ರೀತ್ ಸಿಂಗ್ ಸಿಧು, ಕಬಡ್ಡಿ ಪ್ರವರ್ತಕ ಜಗ್ಗಾ ಜಾಂಡಿಯನ್ ಮತ್ತು ಆರೋಪಿತ ದರೋಡೆಕೋರ ಜಮನ್ ಸಿಂಗ್ ಅವರ ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿತ್ತು.