<p><strong>ತಿರುವನಂತಪುರ</strong>: ಕೆಎಸ್ಆರ್ಟಿಸಿ ಬಸ್ಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸೇರಿ 9 ಮಂದಿ ಮೃತಪಟ್ಟಿರುವ ಘಟನೆ ಪಾಲಕ್ಕಾಡ್ ಜಿಲ್ಲೆಯ ವಡಕ್ಕಾಂಚೇರಿಯಲ್ಲಿ ನಡೆದಿದೆ ಎಂದು ಕೇರಳದ ಸಾರಿಗೆ ಸಚಿವ ಆಂಟೋನಿ ರಾಜು ತಿಳಿಸಿದ್ದಾರೆ.</p>.<p>ಬುಧವಾರ ತಡರಾತ್ರಿ 11.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಕಾರೊಂದನ್ನು ಹಿಂದಿಕ್ಕುವ ಭರದಲ್ಲಿ ಕೆಎಸ್ಆರ್ಟಿಸಿ ಬಸ್ನ ಹಿಂಬದಿಗೆ ಡಿಕ್ಕಿ ಹೊಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.</p>.<p>ಡಿಕ್ಕಿಯ ರಭಸಕ್ಕೆ ಎರಡೂ ಬಸ್ಗಳು ರಸ್ತೆಯಿಂದ ಪಕ್ಕಕ್ಕೆ ಸರಿದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮೃತಪಟ್ಟಿದ್ದಾರೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.<br /><br />ಪ್ರಾಥಮಿಕ ವರದಿಗಳ ಪ್ರಕಾರ, ಖಾಸಗಿ ಬಸ್ನ ಅತಿಯಾದ ವೇಗ ಮತ್ತು ಚಾಲಕನ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.</p>.<p>ಕೆಎಸ್ಆರ್ಟಿಸಿ ಬಸ್ ಕೇರಳದ ಕೊಟ್ಟಾರಕ್ಕರದಿಂದ ತಮಿಳುನಾಡಿನ ಕೊಯಂಬತ್ತೂರಿಗೆ ತೆರಳುತ್ತಿತ್ತು. ಬಸ್ನಲ್ಲಿದ್ದ 81 ಪ್ರಯಾಣಿಕರ ಪೈಕಿ 3 ಮಂದಿ ಮೃತಪಟ್ಟಿದ್ದಾರೆ ಎಂದು ಆಂಟೋನಿ ರಾಜು ಹೇಳಿದ್ದಾರೆ.</p>.<p>ಖಾಸಗಿ ಬಸ್ನಲ್ಲಿ ಎರ್ನಾಕುಲಂನ ಬಸೆಲಿಯೋಸ್ ವಿದ್ಯಾನಿಕೇತನ ಶಾಲೆಯ 42 ವಿದ್ಯಾರ್ಥಿಗಳು ಮತ್ತು 5 ಶಿಕ್ಷಕರು ಪ್ರವಾಸಕ್ಕೆ ತೆರಳುತ್ತಿದ್ದರು.</p>.<p>ಗಾಯಾಳುಗಳು ದಾಖಲಾಗಿರುವ ಪಾಲಕ್ಕಾಡ್ನ ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯ ಸ್ಥಳೀಯಾಡಳಿತ ಸಚಿವ ಎಂ ಬಿ ರಾಜೇಶ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಉಳಿದವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೆಎಸ್ಆರ್ಟಿಸಿ ಬಸ್ಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸೇರಿ 9 ಮಂದಿ ಮೃತಪಟ್ಟಿರುವ ಘಟನೆ ಪಾಲಕ್ಕಾಡ್ ಜಿಲ್ಲೆಯ ವಡಕ್ಕಾಂಚೇರಿಯಲ್ಲಿ ನಡೆದಿದೆ ಎಂದು ಕೇರಳದ ಸಾರಿಗೆ ಸಚಿವ ಆಂಟೋನಿ ರಾಜು ತಿಳಿಸಿದ್ದಾರೆ.</p>.<p>ಬುಧವಾರ ತಡರಾತ್ರಿ 11.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಕಾರೊಂದನ್ನು ಹಿಂದಿಕ್ಕುವ ಭರದಲ್ಲಿ ಕೆಎಸ್ಆರ್ಟಿಸಿ ಬಸ್ನ ಹಿಂಬದಿಗೆ ಡಿಕ್ಕಿ ಹೊಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.</p>.<p>ಡಿಕ್ಕಿಯ ರಭಸಕ್ಕೆ ಎರಡೂ ಬಸ್ಗಳು ರಸ್ತೆಯಿಂದ ಪಕ್ಕಕ್ಕೆ ಸರಿದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮೃತಪಟ್ಟಿದ್ದಾರೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.<br /><br />ಪ್ರಾಥಮಿಕ ವರದಿಗಳ ಪ್ರಕಾರ, ಖಾಸಗಿ ಬಸ್ನ ಅತಿಯಾದ ವೇಗ ಮತ್ತು ಚಾಲಕನ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.</p>.<p>ಕೆಎಸ್ಆರ್ಟಿಸಿ ಬಸ್ ಕೇರಳದ ಕೊಟ್ಟಾರಕ್ಕರದಿಂದ ತಮಿಳುನಾಡಿನ ಕೊಯಂಬತ್ತೂರಿಗೆ ತೆರಳುತ್ತಿತ್ತು. ಬಸ್ನಲ್ಲಿದ್ದ 81 ಪ್ರಯಾಣಿಕರ ಪೈಕಿ 3 ಮಂದಿ ಮೃತಪಟ್ಟಿದ್ದಾರೆ ಎಂದು ಆಂಟೋನಿ ರಾಜು ಹೇಳಿದ್ದಾರೆ.</p>.<p>ಖಾಸಗಿ ಬಸ್ನಲ್ಲಿ ಎರ್ನಾಕುಲಂನ ಬಸೆಲಿಯೋಸ್ ವಿದ್ಯಾನಿಕೇತನ ಶಾಲೆಯ 42 ವಿದ್ಯಾರ್ಥಿಗಳು ಮತ್ತು 5 ಶಿಕ್ಷಕರು ಪ್ರವಾಸಕ್ಕೆ ತೆರಳುತ್ತಿದ್ದರು.</p>.<p>ಗಾಯಾಳುಗಳು ದಾಖಲಾಗಿರುವ ಪಾಲಕ್ಕಾಡ್ನ ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯ ಸ್ಥಳೀಯಾಡಳಿತ ಸಚಿವ ಎಂ ಬಿ ರಾಜೇಶ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಉಳಿದವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>