ಪೆಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಿಂದ ಒಂಭತ್ತು ಮಂದಿ ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.
ಒರಾಕ್ಜೈ ಬುಡಕಟ್ಟು ಜಿಲ್ಲೆಯ ಡೋಲಿ ಕಲ್ಲಿದ್ದಲು ಗಣಿಯಲ್ಲಿ13 ಮಂದಿ ಕಾರ್ಮಿಕರು ಬುಧವಾರ ಕೆಲಸ ಮಾಡುತ್ತಿದ್ದರು. ಆ ಸಂದರ್ಭದಲ್ಲಿ ಗಣಿಯಲ್ಲಿ ಅನಿಲದ ಕಿಡಿಗಳು ಹೊರಸೂಸಿ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ನಾಜಿರ್ ಖಾನ್ ತಿಳಿಸಿದ್ದಾರೆ.
ಗುತ್ತಿಗೆದಾರ ಸೇರಿದಂತೆ ಒಂಭತ್ತು ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ. ಗಾಯಗೊಂಡಿರುವವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಕೆಡಿಎ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅದ್ನಾನ್ ಖಾನ್ ತಿಳಿಸಿದ್ದಾರೆ.