ಲಖನೌ: ರೈಲು ಡಿಕ್ಕಿ ಹೊಡೆದ ಪರಿಣಾಮ 90 ಕುರಿಗಳು ಮತ್ತು 8 ರಣಹದ್ದುಗಳು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಬಲರಾಮಪುರದಲ್ಲಿ ನಡೆದಿದೆ.
ಪಂಚ ಪರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಸರಯು ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ.
ನಾಯಿಗಳು ಕುರಿಗಳ ಹಿಂಡನ್ನು ಅಟ್ಟಾಡಿಸಿಕೊಂಡು ಬಂದಿದ್ದರಿಂದ ಗಾಬರಿಗೊಂಡ ಕುರಿಗಳು ರೈಲ್ವೆ ಹಳಿ ಮೇಲೆ ಬಂದಿವೆ. ಈ ಸಂದರ್ಭ ಆ ಮಾರ್ಗದಲ್ಲಿ ಬಂದ ರೈಲೊಂದು ಡಿಕ್ಕಿ ಹೊಡೆದು ಕುರಿಗಳು ಸಾವಿಗೀಡಾಗಿವೆ ಎಂದು ವರದಿ ತಿಳಿಸಿದೆ.
ಇದಾದ ಸ್ವಲ್ಪ ಸಮಯದ ಬಳಿಕ ಸತ್ತ ಕುರಿಗಳ ಮಾಂಸ ತಿನ್ನಲು ಬಂದಿದ್ದ ರಣಹದ್ದುಗಳಿಗೆ ಮತ್ತೊಂದು ರೈಲು ಡಿಕ್ಕಿಹೊಡೆದಿದೆ.