ಕಾಮರೆಡ್ಡಿ ಜಿಲ್ಲೆಯಲ್ಲಿ ಪಡಿತರ ಕೇಂದ್ರಗಳಿಗೆ ಭೇಟಿ ನೀಡಿದ್ದ ಅವರು, ಅಲ್ಲಿ ಮೋದಿ ಚಿತ್ರ ಇಲ್ಲದಿರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪಡಿತರ ಕೇಂದ್ರಗಳಲ್ಲಿ ವಿತರಿಸುತ್ತಿರುವ ಅಕ್ಕಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಎಷ್ಟು ಹಣ ನೀಡುತ್ತಿವೆ ಎಂಬ ಬಗ್ಗೆ ವಿವರ ನೀಡುವಂತೆ ಕೇಳಿದರು. ಆದರೆ, ನಿರ್ಮಲಾ ಮನವಿಗೆ ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದಾಗ ಅಸಮಾಧಾನಗೊಂಡ ಅವರು, ಆದ್ಯತೆ ಮೇರೆಗೆ ವಿವರ ಕೊಡುವಂತೆ ಸೂಚಿಸಿದರು.