ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಉತ್ತರ ಪ್ರದೇಶಕ್ಕೆ ರಕ್ಷಣಾ ಕಾರಿಡಾರ್ ಘೋಷಿಸಿದಾಗ ಸ್ವಲ್ಪ ಹಿಂಜರಿಕೆ ಇತ್ತು. ತಮಿಳುನಾಡು, ಗುಜರಾತ್, ಹರಿಯಾಣ ಮತ್ತು ಇತರ ಅನೇಕ ರಾಜ್ಯಗಳಲ್ಲಿ ಕೈಗಾರಿಕಾ ವಾತಾವರಣವಿದೆ. ಉತ್ತರ ಪ್ರದೇಶದಲ್ಲಿ ಹಿಂದೆ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗೆ (ಎಂಎಸ್ಎಂಇ) ಹೆಚ್ಚಿನ ಮಹತ್ವ ಇತ್ತು. ಆದರೆ ಇಂದು ಹೂಡಿಕೆಸ್ನೇಹಿ ವಾತಾವರಣವನ್ನು ಮುಖ್ಯಮಂತ್ರಿಗಳು ನಿರ್ಮಿಸಿ ತೋರಿಸಿದ್ದಾರೆ’ ಎಂದು ಹೇಳಿದ್ದಾರೆ.