ಮುಂಬೈ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗೆ ಹೊಂದಿರುವ ಸಖ್ಯವನ್ನು ತೊರೆದರೆ ಮಾತ್ರ ದೇಶದ ಮುಂದಿನ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಅವರನ್ನು ಪರಿಗಣಿಸಲು ತೀರ್ಮಾನಿಸಬಹುದು ಎಂದು ಮಹಾರಾಷ್ಟ್ರ ಸಚಿವ ಮತ್ತು ಎನ್ಸಿಪಿ ವಕ್ತಾರ ನವಾಬ್ ಮಲಿಕ್ ಮಂಗಳವಾರ ಹೇಳಿದ್ದಾರೆ.
ಬಿಜೆಪಿಯು ಈಗ ನಡೆಯುತ್ತಿರುವ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ಚುನಾವಣೆಗಳಲ್ಲಿ ಸೋಲು ಅನುಭವಿಸಲಿದೆ ಎಂದು ನವಾಬ್ ಮಲಿಕ್ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿಯ 403 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿಯು 150ಕ್ಕಿಂತ ಕಡಿಮೆ ಸ್ಥಾನ ಗಳಿಸಲಿದೆ ಎಂದು ಅವರು ಸುದ್ದಿಗಾರರಿಗೆ ಹೇಳಿದರು.