ಸೀಟು ಹೊಂದಾಣಿಕೆ ಸೂತ್ರ ಒಪ್ಪಿಗೆಯಾಗದ ಕಾರಣ ನಿತೀಶ್ ವಿರುದ್ಧ ಬಂಡಾಯ ಎದ್ದಿದ್ದಾರೆ ಎಂಬ ಆರೋಪವನ್ನು ಚಿರಾಗ್ ತಳ್ಳಿಹಾಕಿದ್ದಾರೆ. ಗೃಹಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಎಷ್ಟೋ ಬಾರಿ ಭೇಟಿ ಮಾಡಿದ್ದೇನೆ. ಆದರೆ ಸೀಟು ಹೊಂದಾಣಿಕೆ ವಿಷಯ ಚರ್ಚೆಗೇ ಬಂದಿಲ್ಲ’ ಎಂದಿದ್ದಾರೆ. ನಿತೀಶ್ ಅವರಿಗೆ ದೂರದೃಷ್ಟಿ ಇಲ್ಲ. ಅವರು ರಾಜ್ಯವನ್ನು ಭ್ರಷ್ಟಾಚಾರದ ಕೂಪಕ್ಕೆ ತಳ್ಳಿದ್ದಾರೆ ಎಂದೂ ಆರೋಪಿಸಿದ್ದಾರೆ.