<p><strong>ಪಟ್ನಾ:</strong> ಬಿಹಾರದಲ್ಲಿ ಮಹಾ ಮೈತ್ರಿಕೂಟ (ಮಹಾಘಟಬಂಧನ) ಜತೆಗೂಡಿ ನೂತನ ಸರ್ಕಾರ ರಚಿಸಲು ಮುಂದಾಗಿರುವ ಜೆಡಿ(ಯು) ನಾಯಕ ನಿತೀಶ್ ಕುಮಾರ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನಾಯಕ ರಾಹುಲ್ ಗಾಂಧಿ ಅವರಿಗೆ ದೂರವಾಣಿ ಕರೆ ಮಾಡಿ ಧನ್ಯವಾದ ತಿಳಿಸಿದ್ದಾರೆ.</p>.<p>ಬಿಜೆಪಿ ಜತೆ ಮೈತ್ರಿ ಕಡಿದುಕೊಂಡ ಬಳಿಕ ಸರ್ಕಾರ ರಚನೆಗೆ ಬೆಂಬಲ ನೀಡಿದ್ದಕ್ಕಾಗಿ ನಿತೀಶ್ ಅವರು ಪಕ್ಷದ ವರಿಷ್ಠರಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಹೇಳಿವೆ.</p>.<p><a href="https://www.prajavani.net/india-news/chief-minister-deputy-chief-minister-swearing-in-will-be-held-wednesday-at-2-pm-at-raj-bhavan-rjd-961870.html" itemprop="url">ಬಿಹಾರ: ನಾಳೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಪ್ರಮಾಣ ವಚನ</a></p>.<p>ಭಾನುವಾರ ರಾತ್ರಿಯೇ ಸೋನಿಯಾ ಗಾಂಧಿ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದ ನಿತೀಶ್ ಕುಮಾರ್, ಬಳಿಕ ಬಿಜೆಪಿ ಜತೆಗಿನ ಮೈತ್ರಿ ತೊರೆಯುವ ನಿರ್ಧಾರ ಕೈಗೊಂಡಿದ್ದರು.</p>.<p>ಮಹಾಮೈತ್ರಿ ಕೂಟ ಸರ್ಕಾರದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ನಾಳೆ (ಬುಧವಾರ) ಮಧ್ಯಾಹ್ನ 2 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.</p>.<p><a href="https://www.prajavani.net/india-news/bihar-politics-bjp-accuses-nitish-kumar-of-insulting-peoples-mandate-calls-him-paltu-ram-961857.html" itemprop="url">ಜನಾದೇಶವನ್ನು ಅವಮಾನಿಸಿದ ನಿತೀಶ್ ಕುಮಾರ್: ಬಿಜೆಪಿ ವಾಗ್ದಾಳಿ </a></p>.<p>ಈ ಮಧ್ಯೆ, ಕಾಂಗ್ರೆಸ್ ಪಕ್ಷಕ್ಕೆ ನಾಲ್ಕು ಸಚಿವ ಸ್ಥಾನ ದೊರೆಯುವ ನಿರೀಕ್ಷೆ ಇದೆ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಬಿಹಾರದಲ್ಲಿ ಮಹಾ ಮೈತ್ರಿಕೂಟ (ಮಹಾಘಟಬಂಧನ) ಜತೆಗೂಡಿ ನೂತನ ಸರ್ಕಾರ ರಚಿಸಲು ಮುಂದಾಗಿರುವ ಜೆಡಿ(ಯು) ನಾಯಕ ನಿತೀಶ್ ಕುಮಾರ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನಾಯಕ ರಾಹುಲ್ ಗಾಂಧಿ ಅವರಿಗೆ ದೂರವಾಣಿ ಕರೆ ಮಾಡಿ ಧನ್ಯವಾದ ತಿಳಿಸಿದ್ದಾರೆ.</p>.<p>ಬಿಜೆಪಿ ಜತೆ ಮೈತ್ರಿ ಕಡಿದುಕೊಂಡ ಬಳಿಕ ಸರ್ಕಾರ ರಚನೆಗೆ ಬೆಂಬಲ ನೀಡಿದ್ದಕ್ಕಾಗಿ ನಿತೀಶ್ ಅವರು ಪಕ್ಷದ ವರಿಷ್ಠರಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಹೇಳಿವೆ.</p>.<p><a href="https://www.prajavani.net/india-news/chief-minister-deputy-chief-minister-swearing-in-will-be-held-wednesday-at-2-pm-at-raj-bhavan-rjd-961870.html" itemprop="url">ಬಿಹಾರ: ನಾಳೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಪ್ರಮಾಣ ವಚನ</a></p>.<p>ಭಾನುವಾರ ರಾತ್ರಿಯೇ ಸೋನಿಯಾ ಗಾಂಧಿ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದ ನಿತೀಶ್ ಕುಮಾರ್, ಬಳಿಕ ಬಿಜೆಪಿ ಜತೆಗಿನ ಮೈತ್ರಿ ತೊರೆಯುವ ನಿರ್ಧಾರ ಕೈಗೊಂಡಿದ್ದರು.</p>.<p>ಮಹಾಮೈತ್ರಿ ಕೂಟ ಸರ್ಕಾರದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ನಾಳೆ (ಬುಧವಾರ) ಮಧ್ಯಾಹ್ನ 2 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.</p>.<p><a href="https://www.prajavani.net/india-news/bihar-politics-bjp-accuses-nitish-kumar-of-insulting-peoples-mandate-calls-him-paltu-ram-961857.html" itemprop="url">ಜನಾದೇಶವನ್ನು ಅವಮಾನಿಸಿದ ನಿತೀಶ್ ಕುಮಾರ್: ಬಿಜೆಪಿ ವಾಗ್ದಾಳಿ </a></p>.<p>ಈ ಮಧ್ಯೆ, ಕಾಂಗ್ರೆಸ್ ಪಕ್ಷಕ್ಕೆ ನಾಲ್ಕು ಸಚಿವ ಸ್ಥಾನ ದೊರೆಯುವ ನಿರೀಕ್ಷೆ ಇದೆ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>