ಪಟ್ನಾ: ಬಿಹಾರದಲ್ಲಿ ಮಹಾ ಮೈತ್ರಿಕೂಟ (ಮಹಾಘಟಬಂಧನ) ಜತೆಗೂಡಿ ನೂತನ ಸರ್ಕಾರ ರಚಿಸಲು ಮುಂದಾಗಿರುವ ಜೆಡಿ(ಯು) ನಾಯಕ ನಿತೀಶ್ ಕುಮಾರ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನಾಯಕ ರಾಹುಲ್ ಗಾಂಧಿ ಅವರಿಗೆ ದೂರವಾಣಿ ಕರೆ ಮಾಡಿ ಧನ್ಯವಾದ ತಿಳಿಸಿದ್ದಾರೆ.
ಬಿಜೆಪಿ ಜತೆ ಮೈತ್ರಿ ಕಡಿದುಕೊಂಡ ಬಳಿಕ ಸರ್ಕಾರ ರಚನೆಗೆ ಬೆಂಬಲ ನೀಡಿದ್ದಕ್ಕಾಗಿ ನಿತೀಶ್ ಅವರು ಪಕ್ಷದ ವರಿಷ್ಠರಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಹೇಳಿವೆ.