<p class="title"><strong>ಪಟ್ನಾ</strong>: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ (ಕೆಸಿಆರ್) ನೇತೃತ್ವದಲ್ಲಿ ಖಮ್ಮಮ್ನಲ್ಲಿ ನಡೆದ ವಿರೋಧ ಪಕ್ಷಗಳ ನಾಯಕರ ಸಮಾವೇಶಕ್ಕೆ ತಮಗೆ ಆಹ್ವಾನ ಇರಲಿಲ್ಲ. ಆಹ್ವಾನ ಇದ್ದರೂ ಪೂರ್ವನಿರ್ಧರಿತ ಕಾರ್ಯಕ್ರಮಗಳ ಕಾರಣದಿಂದಾಗಿ ಹೋಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. </p>.<p class="title">ಕೆಸಿಆರ್ ನೇತೃತ್ವದಲ್ಲಿ ನಡೆದ ಸಮಾವೇಶವು ಕಾಂಗ್ರೆಸ್–ಬಿಜೆಪಿಯೇತರ ರಂಗವೊಂದರ ರೂಪುಗೊಳ್ಳುವಿಕೆಯ ಆರಂಭಿಕ ಹೆಜ್ಜೆ ಎಂದು ಒಪ್ಪಿಕೊಳ್ಳಲು ನಿತೀಶ್ ನಿರಾಕರಿಸಿದರು. </p>.<p class="title">ರಾಷ್ಟ್ರ ರಾಜಕಾರಣದ ಮಹತ್ವಾಕಾಂಕ್ಷೆಯಿಂದ ಕೆಸಿಆರ್ ಅವರು ತೆಲಂಗಾಣ ರಾಷ್ಟ್ರ ಸಮಿತಿಯನ್ನು ಭಾರತ ರಾಷ್ಟ್ರ ಸಮಿತಿ ಎಂದು ಬದಲಾಯಿಸಿದ್ದಾರೆ. ಈ ಪಕ್ಷದ ಜೊತೆಗೆ ಮೈತ್ರಿಯ ಬಾಗಿಲುಗಳು ತೆರೆದಿವೆ ಎಂದು ನಿತೀಶ್ ಹೇಳಿದ್ದಾರೆ. </p>.<p>ನಿತೀಶ್ ಅವರು ಎನ್ಡಿಎ ತೊರೆದು ಆರ್ಜೆಡಿ, ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚಿಸಿದ ಬಳಿಕ ಕೆಸಿಆರ್ ಅವರು ಬಿಹಾರಕ್ಕೆ ಭೇಟಿ ನೀಡಿದ್ದರು. ಆರ್ಜೆಡಿಯ ಲಾಲು ಪ್ರಸಾದ್ ಅವರನ್ನೂ ಕೆಸಿಆರ್ ಭೇಟಿಯಾಗಿದ್ದರು. </p>.<p>ಲೋಕಸಭೆಗೆ 2024ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ವಿರೋಧ ಪಕ್ಷಗಳೆಲ್ಲ ಒಟ್ಟಾಗಿ ‘ಮುಖ್ಯ ರಂಗ’ವೊಂದರನ್ನು ರಚಿಸಬೇಕು ಎಂಬ ತಮ್ಮ ಚಿಂತನೆಗೆ ಕೆಸಿಆರ್ ಅವರು ನಡೆಸಿರುವ ರ್ಯಾಲಿಯು ಅಡ್ಡಿಯಾಗಬಹುದು ಎಂಬುದನ್ನು ನಿತೀಶ್ ಅಲ್ಲಗಳೆದಿದ್ದಾರೆ.</p>.<p>*</p>.<p>ಸ್ವಂತಕ್ಕಾಗಿ ನನಗೆ ಏನೂ ಬೇಡ ಎಂಬುದನ್ನು ಸ್ಪಷ್ಟಪಡಿಸುತ್ತೇನೆ. ಆದರೆ, ವಿರೋಧ ಪಕ್ಷಗಳೆಲ್ಲ ರಾಷ್ಟ್ರೀಯ ಹಿತಾಸಕ್ತಿಗಾಗಿ ಒಟ್ಟಾಗಬೇಕಿದೆ.<br /><em><strong>–ನಿತೀಶ್ ಕುಮಾರ್, ಬಿಹಾರ ಮುಖ್ಯಮಂತ್ರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಪಟ್ನಾ</strong>: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ (ಕೆಸಿಆರ್) ನೇತೃತ್ವದಲ್ಲಿ ಖಮ್ಮಮ್ನಲ್ಲಿ ನಡೆದ ವಿರೋಧ ಪಕ್ಷಗಳ ನಾಯಕರ ಸಮಾವೇಶಕ್ಕೆ ತಮಗೆ ಆಹ್ವಾನ ಇರಲಿಲ್ಲ. ಆಹ್ವಾನ ಇದ್ದರೂ ಪೂರ್ವನಿರ್ಧರಿತ ಕಾರ್ಯಕ್ರಮಗಳ ಕಾರಣದಿಂದಾಗಿ ಹೋಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. </p>.<p class="title">ಕೆಸಿಆರ್ ನೇತೃತ್ವದಲ್ಲಿ ನಡೆದ ಸಮಾವೇಶವು ಕಾಂಗ್ರೆಸ್–ಬಿಜೆಪಿಯೇತರ ರಂಗವೊಂದರ ರೂಪುಗೊಳ್ಳುವಿಕೆಯ ಆರಂಭಿಕ ಹೆಜ್ಜೆ ಎಂದು ಒಪ್ಪಿಕೊಳ್ಳಲು ನಿತೀಶ್ ನಿರಾಕರಿಸಿದರು. </p>.<p class="title">ರಾಷ್ಟ್ರ ರಾಜಕಾರಣದ ಮಹತ್ವಾಕಾಂಕ್ಷೆಯಿಂದ ಕೆಸಿಆರ್ ಅವರು ತೆಲಂಗಾಣ ರಾಷ್ಟ್ರ ಸಮಿತಿಯನ್ನು ಭಾರತ ರಾಷ್ಟ್ರ ಸಮಿತಿ ಎಂದು ಬದಲಾಯಿಸಿದ್ದಾರೆ. ಈ ಪಕ್ಷದ ಜೊತೆಗೆ ಮೈತ್ರಿಯ ಬಾಗಿಲುಗಳು ತೆರೆದಿವೆ ಎಂದು ನಿತೀಶ್ ಹೇಳಿದ್ದಾರೆ. </p>.<p>ನಿತೀಶ್ ಅವರು ಎನ್ಡಿಎ ತೊರೆದು ಆರ್ಜೆಡಿ, ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚಿಸಿದ ಬಳಿಕ ಕೆಸಿಆರ್ ಅವರು ಬಿಹಾರಕ್ಕೆ ಭೇಟಿ ನೀಡಿದ್ದರು. ಆರ್ಜೆಡಿಯ ಲಾಲು ಪ್ರಸಾದ್ ಅವರನ್ನೂ ಕೆಸಿಆರ್ ಭೇಟಿಯಾಗಿದ್ದರು. </p>.<p>ಲೋಕಸಭೆಗೆ 2024ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ವಿರೋಧ ಪಕ್ಷಗಳೆಲ್ಲ ಒಟ್ಟಾಗಿ ‘ಮುಖ್ಯ ರಂಗ’ವೊಂದರನ್ನು ರಚಿಸಬೇಕು ಎಂಬ ತಮ್ಮ ಚಿಂತನೆಗೆ ಕೆಸಿಆರ್ ಅವರು ನಡೆಸಿರುವ ರ್ಯಾಲಿಯು ಅಡ್ಡಿಯಾಗಬಹುದು ಎಂಬುದನ್ನು ನಿತೀಶ್ ಅಲ್ಲಗಳೆದಿದ್ದಾರೆ.</p>.<p>*</p>.<p>ಸ್ವಂತಕ್ಕಾಗಿ ನನಗೆ ಏನೂ ಬೇಡ ಎಂಬುದನ್ನು ಸ್ಪಷ್ಟಪಡಿಸುತ್ತೇನೆ. ಆದರೆ, ವಿರೋಧ ಪಕ್ಷಗಳೆಲ್ಲ ರಾಷ್ಟ್ರೀಯ ಹಿತಾಸಕ್ತಿಗಾಗಿ ಒಟ್ಟಾಗಬೇಕಿದೆ.<br /><em><strong>–ನಿತೀಶ್ ಕುಮಾರ್, ಬಿಹಾರ ಮುಖ್ಯಮಂತ್ರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>