ವೃಕ್ಷಗಳಿಗೆ ರಾಖಿ ಕಟ್ಟಿ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸಿದ ಬಿಹಾರ ಸಿಎಂ

ಪಟ್ನಾ: ರಕ್ಷಾಬಂಧನ ದಿನವಾದ ಇಂದು (ಆ.22) ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವೃಕ್ಷಗಳಿಗೆ ರಾಖಿ ಕಟ್ಟಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಿದರು.
2012ರಿಂದಲೂ ಬಿಹಾರದ ಎನ್ಡಿಎ ಸರ್ಕಾರ ರಕ್ಷಾಬಂಧನ ದಿನವನ್ನು 'ವೃಕ್ಷ ರಕ್ಷಾ ದಿನ' (ಮರ ಸಂರಕ್ಷಣಾ ದಿನ) ಎಂದು ಆಚರಿಸುತ್ತಿದೆ.
Bihar CM Nitish Kumar ties rakhis to trees in Patna on #Rakshabandhan to spread awareness on environmental conservation.
"Since 2012, we've been observing Rakshabandhan as 'Vriksh Raksha Diwas' (Tree Protection Day). People should save trees, just like they save people," he says pic.twitter.com/Gx6LKAmDlL
— ANI (@ANI) August 22, 2021
ಪಟ್ನಾದಲ್ಲಿ ನಿತೀಶ್ ಕುಮಾರ್ ವೃಕ್ಷಗಳಿಗೆ ರಾಖಿ ಕಟ್ಟುವ ಮೂಲಕ ಜನರಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು. ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರವನ್ನು ರಕ್ಷಣೆ ಮಾಡಬೇಕು ಎಂದು ಜನರಿಗೆ ಕರೆ ನೀಡಿದರು.
ರಾಜ್ಯದಲ್ಲಿ ’ಜಲ ಜೀವನ್ ಮಿಷನ್’ ಯೋಜನೆ ಅಡಿಯಲ್ಲಿ ಸಸಿಗಳನ್ನು ನೆಡಲು ಸರ್ಕಾರ ಗಮನ ಹರಿಸಿದೆ. ಭವಿಷ್ಯದ ಪೀಳಿಗೆಗಾಗಿ ನಾವು ಸಸಿಗಳನ್ನು ನೆಟ್ಟು ಪರಿಸರವನ್ನು ರಕ್ಷಿಸುವ ಕೆಲಸ ಮಾಡಬೇಕಿದೆ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.