‘ಅವರ ದೆಹಲಿ ಪ್ರವಾಸಕ್ಕೂ ಉದ್ದೇಶಿತ ಸಂಪುಟ ಪುನಾರಚನೆ ವಿಷಯಗಳಿಗೆ ಏಕೆ ಸಂಬಂಧ ಕಲ್ಪಿಸಲಾಗುತ್ತಿದೆ ಎಂದು ನನಗೆ ತಿಳಿಯುತ್ತಿಲ್ಲ. ನನಗೆ ತಿಳಿದಿರುವಂತೆ, ಅವರ ಕಣ್ಣಿನ ಸಮಸ್ಯೆಗೆ ಚಿಕಿತ್ಸೆ ಅಗತ್ಯವಿದೆ. ಹೀಗಾಗಿ, ರಾಷ್ಟ್ರ ರಾಜಧಾನಿಗೆ ಭೇಟಿ ನೀಡುತ್ತಿದ್ದಾರೆ.’ ಎಂದು ನಿತೀಶ್ ಕುಮಾರ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಹೇಳಿದ್ದಾರೆ.