<p><strong>ಚೆನ್ನೈ</strong>: ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಮಂಗಳವಾರ ಚಂಡಮಾರುತದ ಸ್ವರೂಪ ಪಡೆದಿದೆ. ಬುಧವಾರದ ಸಂಜೆ ವೇಳೆಗೆ ತೀವ್ರ ಚಂಡಮಾರುತವಾಗಿ ಬದಲಾಗಲಿದ್ದು, ಚೆನ್ನೈ ಮತ್ತು ಪುದುಚೇರಿಯನ್ನು ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.</p>.<p>ಮಂಗಳವಾರವೇ ತಮಿಳುನಾಡು ಮತ್ತು ಪುದುಚೇರಿಯ ಹಲವೆಡೆ ಮಳೆಯಾಗಿದೆ. ಚೆನ್ನೈನಲ್ಲಿ ಭಾರಿ ಮಳೆಯಾಗಿದ್ದು, ಹಲವು ರಸ್ತೆಗಳು ಮತ್ತು ತಗ್ಗು ಪ್ರದೇಶಗಳು ಈಗಾಗಲೇ ಜಲಾವೃತವಾಗಿವೆ.</p>.<p>ತಮಿಳುನಾಡಿನ ಹಲವು ಜಲಾಶಯಗಳು ಭರ್ತಿಯಾಗಿವೆ. ಚಂಬರಕ್ಕಂಅಣೆಕಟ್ಟಿನ ಒಳಹರಿವನ್ನು ಗಮನಿಸಲಾಗುತ್ತಿದೆ. ಬುಧವಾರಭಾರಿ ಮಳೆಯಾಗುವ ಕಾರಣ ತಗ್ಗಿನ ಪ್ರದೇಶಗಳಲ್ಲಿ ಪ್ರವಾಹದ ಸ್ಥಿತಿ ಉಂಟಾಗಬಹುದು.</p>.<p>ಚಂಡಮಾರುತದ ಜತೆಗೆ ತೀವ್ರ ಗಾಳಿ ಬೀಸುವ ಕಾರಣ ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳುವ ಹಾಗೂ ವಿದ್ಯುತ್ ತಂತಿಗಳು ತುಂಡಾಗುವ ಸಾಧ್ಯತೆ ಇದೆ. ಮನೆಗಳಿಗೆ ಹಾಕಿರುವ ತಗಡಿನ ಶೀಟುಗಳು ಹಾರಿಹೋಗುವ ಅಪಾಯವಿದೆ. ಆದರೆ ಈ ಎಲ್ಲಾ ಪರಿಸ್ಥಿತಿಗಳನ್ನು ಎದುರಿಸಲು ಸರ್ಕಾರದ ವಿವಿಧ ಸಂಸ್ಥೆಗಳು ಸಜ್ಜಾಗಿವೆ ಎಂದು ಮೂಲಗಳು ಹೇಳಿವೆ.</p>.<p><strong>ಭಾರಿ ಸಿದ್ಧತೆ</strong><br />* 130-140 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ<br />* ಚಂಡಮಾರುತದ ವೇಳೆ ಸಮುದ್ರದಲ್ಲಿ2 ಮೀಟರ್ ಎತ್ತರದ ಅಲೆಗಳು ಏಳಬಹುದು<br />* ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶ ಮತ್ತು ಕೇರಳದಲ್ಲಿ50 ಎನ್ಡಿಆರ್ಎಫ್ ತಂಡಗಳು ಸನ್ನದ್ಧ<br />* ಚಂಡಮಾರುತದ ವೇಳೆ ಜನರ ಓಡಾಟವನ್ನು ತಡೆಯುವ ಉದ್ದೇಶದಿಂದ ಪುದುಚೇರಿ ಸರ್ಕಾರವು ನಿಷೇಧಾಜ್ಞೆ ಜಾರಿ ಮಾಡಿದೆ. ಮಂಗಳವಾರ ರಾತ್ರಿ 9ರಿಂದ ಗುರುವಾರ ಬೆಳಿಗ್ಗೆ 9ರವರೆಗೆ ಇದು ಅನ್ವಯ<br />* ತಮಿಳುನಾಡಿನಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ<br />* ಕೇರಳ ಮತ್ತು ತಮಿಳುನಾಡಿನ ಮಧ್ಯೆ ಓಡಾಡಬೇಕಿದ್ದ 6 ವಿಶೇಷ ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆಯ ತಿರುವನಂತಪುರ ವಿಭಾಗವು ರದ್ದುಪಡಿಸಿದೆ<br />* ತಮಿಳುನಾಡು ಮತ್ತು ಆಂಧ್ರಪ್ರದೇಶದ ಮಧ್ಯೆ ಸಂಚರಿಸಬೇಕಿದ್ದ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ</p>.<p>*</p>.<p>ತಮಿಳುನಾಡು ಮತ್ತು ಪುದುಚೇರಿ ಮುಖ್ಯಮಂತ್ರಿಗಳ ಜತೆ ಈಗಾಗಲೇ ಮಾತನಾಡಿದ್ದೇನೆ. ಚಂಡಮಾರುತವನ್ನು ಎದುರಿಸಲು ಕೇಂದ್ರದಿಂದ ಅಗತ್ಯ ನೆರವು ನೀಡಲಾಗುತ್ತದೆ.<br /><em><strong>-ನರೇಂದ್ರ ಮೋದಿ, ಪ್ರಧಾನಿ</strong></em></p>.<p><em><strong>*</strong></em></p>.<p>ಚಂಡಮಾರುತದಿಂದ ಉಂಟಾಗಲಿರುವ ತುರ್ತುಸ್ಥಿತಿಯನ್ನು ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸರ್ಕಾರದ ಎಲ್ಲಾ ಸಂಸ್ಥೆಗಳೂ ಸನ್ನದ್ಧವಾಗಿವೆ.<br /><em><strong>-ವಿ.ನಾರಾಯಣ ಸ್ವಾಮಿ, ಪುದುಚೇರಿ ಮುಖ್ಯಮಂತ್ರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಮಂಗಳವಾರ ಚಂಡಮಾರುತದ ಸ್ವರೂಪ ಪಡೆದಿದೆ. ಬುಧವಾರದ ಸಂಜೆ ವೇಳೆಗೆ ತೀವ್ರ ಚಂಡಮಾರುತವಾಗಿ ಬದಲಾಗಲಿದ್ದು, ಚೆನ್ನೈ ಮತ್ತು ಪುದುಚೇರಿಯನ್ನು ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.</p>.<p>ಮಂಗಳವಾರವೇ ತಮಿಳುನಾಡು ಮತ್ತು ಪುದುಚೇರಿಯ ಹಲವೆಡೆ ಮಳೆಯಾಗಿದೆ. ಚೆನ್ನೈನಲ್ಲಿ ಭಾರಿ ಮಳೆಯಾಗಿದ್ದು, ಹಲವು ರಸ್ತೆಗಳು ಮತ್ತು ತಗ್ಗು ಪ್ರದೇಶಗಳು ಈಗಾಗಲೇ ಜಲಾವೃತವಾಗಿವೆ.</p>.<p>ತಮಿಳುನಾಡಿನ ಹಲವು ಜಲಾಶಯಗಳು ಭರ್ತಿಯಾಗಿವೆ. ಚಂಬರಕ್ಕಂಅಣೆಕಟ್ಟಿನ ಒಳಹರಿವನ್ನು ಗಮನಿಸಲಾಗುತ್ತಿದೆ. ಬುಧವಾರಭಾರಿ ಮಳೆಯಾಗುವ ಕಾರಣ ತಗ್ಗಿನ ಪ್ರದೇಶಗಳಲ್ಲಿ ಪ್ರವಾಹದ ಸ್ಥಿತಿ ಉಂಟಾಗಬಹುದು.</p>.<p>ಚಂಡಮಾರುತದ ಜತೆಗೆ ತೀವ್ರ ಗಾಳಿ ಬೀಸುವ ಕಾರಣ ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳುವ ಹಾಗೂ ವಿದ್ಯುತ್ ತಂತಿಗಳು ತುಂಡಾಗುವ ಸಾಧ್ಯತೆ ಇದೆ. ಮನೆಗಳಿಗೆ ಹಾಕಿರುವ ತಗಡಿನ ಶೀಟುಗಳು ಹಾರಿಹೋಗುವ ಅಪಾಯವಿದೆ. ಆದರೆ ಈ ಎಲ್ಲಾ ಪರಿಸ್ಥಿತಿಗಳನ್ನು ಎದುರಿಸಲು ಸರ್ಕಾರದ ವಿವಿಧ ಸಂಸ್ಥೆಗಳು ಸಜ್ಜಾಗಿವೆ ಎಂದು ಮೂಲಗಳು ಹೇಳಿವೆ.</p>.<p><strong>ಭಾರಿ ಸಿದ್ಧತೆ</strong><br />* 130-140 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ<br />* ಚಂಡಮಾರುತದ ವೇಳೆ ಸಮುದ್ರದಲ್ಲಿ2 ಮೀಟರ್ ಎತ್ತರದ ಅಲೆಗಳು ಏಳಬಹುದು<br />* ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶ ಮತ್ತು ಕೇರಳದಲ್ಲಿ50 ಎನ್ಡಿಆರ್ಎಫ್ ತಂಡಗಳು ಸನ್ನದ್ಧ<br />* ಚಂಡಮಾರುತದ ವೇಳೆ ಜನರ ಓಡಾಟವನ್ನು ತಡೆಯುವ ಉದ್ದೇಶದಿಂದ ಪುದುಚೇರಿ ಸರ್ಕಾರವು ನಿಷೇಧಾಜ್ಞೆ ಜಾರಿ ಮಾಡಿದೆ. ಮಂಗಳವಾರ ರಾತ್ರಿ 9ರಿಂದ ಗುರುವಾರ ಬೆಳಿಗ್ಗೆ 9ರವರೆಗೆ ಇದು ಅನ್ವಯ<br />* ತಮಿಳುನಾಡಿನಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ<br />* ಕೇರಳ ಮತ್ತು ತಮಿಳುನಾಡಿನ ಮಧ್ಯೆ ಓಡಾಡಬೇಕಿದ್ದ 6 ವಿಶೇಷ ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆಯ ತಿರುವನಂತಪುರ ವಿಭಾಗವು ರದ್ದುಪಡಿಸಿದೆ<br />* ತಮಿಳುನಾಡು ಮತ್ತು ಆಂಧ್ರಪ್ರದೇಶದ ಮಧ್ಯೆ ಸಂಚರಿಸಬೇಕಿದ್ದ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ</p>.<p>*</p>.<p>ತಮಿಳುನಾಡು ಮತ್ತು ಪುದುಚೇರಿ ಮುಖ್ಯಮಂತ್ರಿಗಳ ಜತೆ ಈಗಾಗಲೇ ಮಾತನಾಡಿದ್ದೇನೆ. ಚಂಡಮಾರುತವನ್ನು ಎದುರಿಸಲು ಕೇಂದ್ರದಿಂದ ಅಗತ್ಯ ನೆರವು ನೀಡಲಾಗುತ್ತದೆ.<br /><em><strong>-ನರೇಂದ್ರ ಮೋದಿ, ಪ್ರಧಾನಿ</strong></em></p>.<p><em><strong>*</strong></em></p>.<p>ಚಂಡಮಾರುತದಿಂದ ಉಂಟಾಗಲಿರುವ ತುರ್ತುಸ್ಥಿತಿಯನ್ನು ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸರ್ಕಾರದ ಎಲ್ಲಾ ಸಂಸ್ಥೆಗಳೂ ಸನ್ನದ್ಧವಾಗಿವೆ.<br /><em><strong>-ವಿ.ನಾರಾಯಣ ಸ್ವಾಮಿ, ಪುದುಚೇರಿ ಮುಖ್ಯಮಂತ್ರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>