<p><strong>ಕೊಚ್ಚಿ</strong>: ಹೊಸ ಮಾಹಿತಿ ತಂತ್ರಜ್ಞಾನ ಕಾನೂನುಗಳನ್ನು ಅಳವಡಿಸಿಕೊಳ್ಳದ ಸುದ್ದಿ ಪ್ರಸಾರಕ ಸಂಘಟನೆಗಳ (ಎನ್ಬಿಎ) ಸದಸ್ಯರ ವಿರುದ್ಧ ಯಾವುದೇ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳದಂತೆ ಕೇರಳ ಹೈಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ನ್ಯಾಯಮೂರ್ತಿ ಪಿ.ಬಿ. ಸುರೇಶ್ ಕುಮಾರ್ ಅವರು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಸಹ ಜಾರಿಗೊಳಿಸಿದ್ದಾರೆ.</p>.<p>‘ಹೊಸ ಮಾಹಿತಿ ತಂತ್ರಜ್ಞಾನ ಕಾನೂನುಗಳು ಸರ್ಕಾರಿ ಅಧಿಕಾರಿಗಳಿಗೆ ಅತಿ ಹೆಚ್ಚಿನ ಅಧಿಕಾರ ನೀಡುತ್ತವೆ. ಇದರಿಂದ, ವಿನಾಕಾರಣ ಮಾಧ್ಯಮಗಳ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಿರ್ಬಂಧ ವಿಧಿಸುವ ಪ್ರಯತ್ನ ನಡೆಯುತ್ತದೆ’ ಎಂದು ಎನ್ಬಿಎ ಅರ್ಜಿ ಸಲ್ಲಿಸಿತ್ತು.</p>.<p>‘ಮಾಧ್ಯಮ ಕಂಪನಿಗಳು ಅಥವಾ ಸಂಸ್ಥೆಗಳು ಸ್ವಯಂ ನಿಯಂತ್ರಣ ಸಂಸ್ಥೆಯನ್ನು ರೂಪಿಸಿಕೊಳ್ಳಬೇಕು. ಈ ಸಂಸ್ಥೆಯ ಮುಖ್ಯಸ್ಥರನ್ನಾಗಿ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅಥವಾ ಖ್ಯಾತ ವ್ಯಕ್ತಿಗಳನ್ನು ನೇಮಿಸಬೇಕು.ನಿವೃತ್ತ ನ್ಯಾಯಮೂರ್ತಿಗಳ ಆದೇಶವನ್ನು ಜಂಟಿ ಕಾರ್ಯದರ್ಶಿ ಪರಿಶೀಲಿಸುತ್ತಾರೆ’ ಎಂದು ನಿಯಮದಲ್ಲಿ ತಿಳಿಸಲಾಗಿದೆ ಎಂದು ಎನ್ಬಿಎ ಪರ ವಕೀಲ ಮನಿಂದರ್ ಸಿಂಗ್ ನ್ಯಾಯಾಲಯಕ್ಕೆ ವಿವರಿಸಿದರು.</p>.<p>ಎನ್ಬಿಎ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆಯೂ ನ್ಯಾಯಾಲಯ ಕೇಂದ್ರಕ್ಕೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ</strong>: ಹೊಸ ಮಾಹಿತಿ ತಂತ್ರಜ್ಞಾನ ಕಾನೂನುಗಳನ್ನು ಅಳವಡಿಸಿಕೊಳ್ಳದ ಸುದ್ದಿ ಪ್ರಸಾರಕ ಸಂಘಟನೆಗಳ (ಎನ್ಬಿಎ) ಸದಸ್ಯರ ವಿರುದ್ಧ ಯಾವುದೇ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳದಂತೆ ಕೇರಳ ಹೈಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ನ್ಯಾಯಮೂರ್ತಿ ಪಿ.ಬಿ. ಸುರೇಶ್ ಕುಮಾರ್ ಅವರು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಸಹ ಜಾರಿಗೊಳಿಸಿದ್ದಾರೆ.</p>.<p>‘ಹೊಸ ಮಾಹಿತಿ ತಂತ್ರಜ್ಞಾನ ಕಾನೂನುಗಳು ಸರ್ಕಾರಿ ಅಧಿಕಾರಿಗಳಿಗೆ ಅತಿ ಹೆಚ್ಚಿನ ಅಧಿಕಾರ ನೀಡುತ್ತವೆ. ಇದರಿಂದ, ವಿನಾಕಾರಣ ಮಾಧ್ಯಮಗಳ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಿರ್ಬಂಧ ವಿಧಿಸುವ ಪ್ರಯತ್ನ ನಡೆಯುತ್ತದೆ’ ಎಂದು ಎನ್ಬಿಎ ಅರ್ಜಿ ಸಲ್ಲಿಸಿತ್ತು.</p>.<p>‘ಮಾಧ್ಯಮ ಕಂಪನಿಗಳು ಅಥವಾ ಸಂಸ್ಥೆಗಳು ಸ್ವಯಂ ನಿಯಂತ್ರಣ ಸಂಸ್ಥೆಯನ್ನು ರೂಪಿಸಿಕೊಳ್ಳಬೇಕು. ಈ ಸಂಸ್ಥೆಯ ಮುಖ್ಯಸ್ಥರನ್ನಾಗಿ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅಥವಾ ಖ್ಯಾತ ವ್ಯಕ್ತಿಗಳನ್ನು ನೇಮಿಸಬೇಕು.ನಿವೃತ್ತ ನ್ಯಾಯಮೂರ್ತಿಗಳ ಆದೇಶವನ್ನು ಜಂಟಿ ಕಾರ್ಯದರ್ಶಿ ಪರಿಶೀಲಿಸುತ್ತಾರೆ’ ಎಂದು ನಿಯಮದಲ್ಲಿ ತಿಳಿಸಲಾಗಿದೆ ಎಂದು ಎನ್ಬಿಎ ಪರ ವಕೀಲ ಮನಿಂದರ್ ಸಿಂಗ್ ನ್ಯಾಯಾಲಯಕ್ಕೆ ವಿವರಿಸಿದರು.</p>.<p>ಎನ್ಬಿಎ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆಯೂ ನ್ಯಾಯಾಲಯ ಕೇಂದ್ರಕ್ಕೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>