ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಸಮುದಾಯ ಹೆಗಲು ಕೊಡಬೇಕು: ಅಮಿತ್ ಶಾ

Last Updated 19 ನವೆಂಬರ್ 2022, 20:34 IST
ಅಕ್ಷರ ಗಾತ್ರ

ನವದೆಹಲಿ: ಯಾವುದೇ ದೇಶವು ಏಕಾಂಗಿಯಾಗಿ ಭಯೋತ್ಪಾದನೆ ತಡೆಯಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಂತರರಾಷ್ಟ್ರೀಯಸಮುದಾಯವು ಹೆಗಲಿಗೆ ಹೆಗಲು ಕೊಟ್ಟು ಭಯೋತ್ಪಾದನೆ ವಿರುದ್ಧ ಹೋರಾಡಬೇಕು ಎಂದು ಕರೆ ನೀಡಿದರು.

‘ಭಯೋತ್ಪಾದನೆಗೆ ಹಣ ಇಲ್ಲ’ (ಎನ್‌ಎಂಎಫ್‌ಟಿ) ಸಮಾವೇಶದಲ್ಲಿ ಭಯೋತ್ಪಾದನೆಗೆ ಹಣಕಾಸು ನೆರವು ವಿಷಯದ ಕುರಿತು ಅವರು ಶನಿವಾರ ಮಾತನಾಡಿದರು. ‘ಭಯೋತ್ಪಾದಕರಿಗೆ ಸ್ವರ್ಗ ಎನಿಸಿರುವ ದೇಶಗಳಲ್ಲಿ ಅವರ ಅನಿಯಂತ್ರಿತ ಆರ್ಥಿಕ ಚಟುವಟಿಕೆಗಳಿಗೆ ಕಡಿವಾಣ ಹೇರಬೇಕಿದೆ. ಎಲ್ಲ ದೇಶಗಳು ತಮ್ಮ ಭೌಗೋಳಿಕ–ರಾಜಕೀಯ ಹಿತಾಸಕ್ತಿಗಳನ್ನು ಬದಿಗಿರಿಸಿ, ಈ ಯತ್ನದಲ್ಲಿ ತೊಡಗಿಸಿಕೊಳ್ಳಬೇಕಿದೆ’ ಎಂದರು.

*

ಗಡಿ ಮೀರಿದ ಭಯೋತ್ಪಾದನಾ ಬೆದರಿಕೆಯನ್ನು ಮಣಿಸಬೇಕಾದರೆ, ಅಂತರರಾಷ್ಟ್ರೀಯ ಸಮುದಾಯದ ನಡುವೆ ಹಂಚಿಕೆಯಾಗುವ ಗುಪ್ತಚರ ಮಾಹಿತಿಯಲ್ಲಿ ಪಾದರ್ಶಕತೆ ಇರಬೇಕು.
–ಅಮಿತ್ ಶಾ, ಕೇಂದ್ರ ಗೃಹಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT