<p><strong>ನವದೆಹಲಿ:</strong> ‘ಕಾರ್ಪೊರೇಟ್ ದಲ್ಲಾಳಿ ನೀರಾ ರಾಡಿಯಾ ಅವರು ಕೆಲ ರಾಜಕಾರಣಿಗಳು, ಉದ್ಯಮಿಗಳು, ಪತ್ರಕರ್ತರು ಹಾಗೂ ಇತರರೊಡನೆ ನಡೆಸಿರುವ ಸಂಭಾಷಣೆಗಳನ್ನೊಳಗೊಂಡ ಧ್ವನಿಮುದ್ರಿಕೆಯಲ್ಲಿ ಯಾವುದೇ ಬಗೆಯ ಅಪರಾಧ ಕಂಡುಬಂದಿಲ್ಲ’ ಎಂದು ಸಿಬಿಐ ಬುಧವಾರ ಸುಪ್ರೀಂ ಕೋರ್ಟ್ಗೆ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಹಿಮಾ ಕೊಹ್ಲಿ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ಬುಧವಾರ ಈ ಕುರಿತ ವಿಚಾರಣೆ ನಡೆಸಿತು.</p>.<p><a href="https://www.prajavani.net/india-news/supreme-court-constitution-bench-to-live-stream-proceedings-from-september-27-973946.html" itemprop="url">ಸೆ.27ರಿಂದ ಸುಪ್ರೀಂ ಕೋರ್ಟ್ ಕಲಾಪ ನೇರ ಪ್ರಸಾರ </a></p>.<p>‘ಸುಪ್ರೀಂ ಕೋರ್ಟ್ನ ನಿರ್ದೇಶನದಂತೆ ಎಲ್ಲಾ ಧ್ವನಿಮುದ್ರಿಕೆಗಳನ್ನು ಸಿಬಿಐ ತನಿಖೆಗೊಳಪಡಿಸಿದೆ. ಈ ಕುರಿತ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಲಾಗಿದೆ. ಅದರಲ್ಲಿ 14 ಪ್ರಾಥಮಿಕ ವಿಚಾರಣೆಗಳನ್ನು ದಾಖಲಿಸಲಾಗಿದೆ’ ಎಂದು ಸಿಬಿಐ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು ನ್ಯಾಯಪೀಠಕ್ಕೆ ತಿಳಿಸಿದರು.</p>.<p>ಈ ಕುರಿತು ವಾಸ್ತವ ಸ್ಥಿತಿ ಒಳಗೊಂಡ ಪರಿಷ್ಕೃತ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಿದ ನ್ಯಾಯಪೀಠವು ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕಾರ್ಪೊರೇಟ್ ದಲ್ಲಾಳಿ ನೀರಾ ರಾಡಿಯಾ ಅವರು ಕೆಲ ರಾಜಕಾರಣಿಗಳು, ಉದ್ಯಮಿಗಳು, ಪತ್ರಕರ್ತರು ಹಾಗೂ ಇತರರೊಡನೆ ನಡೆಸಿರುವ ಸಂಭಾಷಣೆಗಳನ್ನೊಳಗೊಂಡ ಧ್ವನಿಮುದ್ರಿಕೆಯಲ್ಲಿ ಯಾವುದೇ ಬಗೆಯ ಅಪರಾಧ ಕಂಡುಬಂದಿಲ್ಲ’ ಎಂದು ಸಿಬಿಐ ಬುಧವಾರ ಸುಪ್ರೀಂ ಕೋರ್ಟ್ಗೆ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಹಿಮಾ ಕೊಹ್ಲಿ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ಬುಧವಾರ ಈ ಕುರಿತ ವಿಚಾರಣೆ ನಡೆಸಿತು.</p>.<p><a href="https://www.prajavani.net/india-news/supreme-court-constitution-bench-to-live-stream-proceedings-from-september-27-973946.html" itemprop="url">ಸೆ.27ರಿಂದ ಸುಪ್ರೀಂ ಕೋರ್ಟ್ ಕಲಾಪ ನೇರ ಪ್ರಸಾರ </a></p>.<p>‘ಸುಪ್ರೀಂ ಕೋರ್ಟ್ನ ನಿರ್ದೇಶನದಂತೆ ಎಲ್ಲಾ ಧ್ವನಿಮುದ್ರಿಕೆಗಳನ್ನು ಸಿಬಿಐ ತನಿಖೆಗೊಳಪಡಿಸಿದೆ. ಈ ಕುರಿತ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಲಾಗಿದೆ. ಅದರಲ್ಲಿ 14 ಪ್ರಾಥಮಿಕ ವಿಚಾರಣೆಗಳನ್ನು ದಾಖಲಿಸಲಾಗಿದೆ’ ಎಂದು ಸಿಬಿಐ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು ನ್ಯಾಯಪೀಠಕ್ಕೆ ತಿಳಿಸಿದರು.</p>.<p>ಈ ಕುರಿತು ವಾಸ್ತವ ಸ್ಥಿತಿ ಒಳಗೊಂಡ ಪರಿಷ್ಕೃತ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಿದ ನ್ಯಾಯಪೀಠವು ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>