<p><strong>ನವದೆಹಲಿ</strong>: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಒಂದೇಒಂದು ಸಾವಿನ ಪ್ರಕರಣ ವರದಿಯಾಗಿಲ್ಲ.2020ರ ಏಪ್ರಿಲ್ ಬಳಿಕ ಇದೇಮೊದಲ ಬಾರಿಗೆ ಒಂದು ದಿನದ ಅವಧಿಯಲ್ಲಿ ಸಾವಿನ ಪ್ರಕರಣಗಳು ವರದಿಯಾಗಿಲ್ಲ ಎಂದುದೆಹಲಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.</p>.<p>ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 100 ಜನರಿಗೆ ಕೋವಿಡ್-19 ಸೋಂಕು ತಗುಲಿದೆ. ಇದೇ ವೇಳೆ 144 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.</p>.<p>ಈ ವರೆಗೆ ಒಟ್ಟು 6,36,260 ಸೋಂಕು ಪ್ರಕರಣಗಳು ದೆಹಲಿಯಲ್ಲಿ ವರದಿಯಾಗಿದ್ದು, ಇದರಲ್ಲಿ 6,24,326 ಮಂದಿ ಗುಣಮುಖರಾಗಿದ್ದಾರೆ. 10,882 ಸೋಂಕಿತರು ಮೃತಪಟ್ಟಿದ್ದಾರೆ.</p>.<p>ಸಾವಿನ ಪ್ರಕರಣ ವರದಿಯಾಗದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ʼದೆಹಲಿ ನಿವಾಸಿಗಳಿಗೆ ಸಿಹಿ ಸುದ್ದಿ. ಇಂದು ದೆಹಲಿಯಲ್ಲಿ ಕೋವಿಡ್-19ನಿಂದ ಒಂದೂ ಸಾವಿನ ಪ್ರಕರಣ ವರದಿಯಾಗಿಲ್ಲ. ದೆಹಲಿ ನಿವಾಸಿಗಳಿಗೆ ಅಭಿನಂದನೆಗಳು. ಕೊರೊನಾವೈರಸ್ ಪ್ರಕರಣಗಳು ಕಡಿಮೆಯಾಗುತ್ತಿವೆ. ಲಸಿಕೆ ಅಭಿಯಾನ ಉತ್ತಮ ವೇಗದಲ್ಲಿ ಸಾಗುತ್ತಿದೆ. ನಗರದ ನಿವಾಸಿಗಳೆಲ್ಲ ಕೊರೊನಾವೈರಸ್ ವಿರುದ್ಧ ತುಂಬಾ ಕಠಿಣವಾದ ಯುದ್ಧ ಮಾಡಿದ್ದೇವೆ.ಮುಂದೆಯೂ ಜಾಗರೂಕರಾಗಿರಬೇಕಿದೆʼ ಎಂದು ತಿಳಿಸಿದ್ದಾರೆ.</p>.<p>ದೆಹಲಿಯಲ್ಲಿ ಈವರೆಗೆ 1.11 ಕೋಟಿ ಜನರಿಗೆ ಕೋವಿಡ್-19 ಸೋಂಕು ಪರೀಕ್ಷೆ ನಡೆಸಲಾಗಿದೆ.</p>.<p>ದೇಶದಲ್ಲಿ ಇದುವರೆಗೆ ಒಟ್ಟು 1,05,48,521 ಸೋಂಕಿತರು ಚೇತರಿಸಿಕೊಂಡಿದ್ದು, 1,55,158 ಮಂದಿ ಮೃತಪಟ್ಟಿದ್ದಾರೆ. ಇನ್ನೂ 1,43,625 ಸಕ್ರಿಯ ಪ್ರಕರಣಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಒಂದೇಒಂದು ಸಾವಿನ ಪ್ರಕರಣ ವರದಿಯಾಗಿಲ್ಲ.2020ರ ಏಪ್ರಿಲ್ ಬಳಿಕ ಇದೇಮೊದಲ ಬಾರಿಗೆ ಒಂದು ದಿನದ ಅವಧಿಯಲ್ಲಿ ಸಾವಿನ ಪ್ರಕರಣಗಳು ವರದಿಯಾಗಿಲ್ಲ ಎಂದುದೆಹಲಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.</p>.<p>ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 100 ಜನರಿಗೆ ಕೋವಿಡ್-19 ಸೋಂಕು ತಗುಲಿದೆ. ಇದೇ ವೇಳೆ 144 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.</p>.<p>ಈ ವರೆಗೆ ಒಟ್ಟು 6,36,260 ಸೋಂಕು ಪ್ರಕರಣಗಳು ದೆಹಲಿಯಲ್ಲಿ ವರದಿಯಾಗಿದ್ದು, ಇದರಲ್ಲಿ 6,24,326 ಮಂದಿ ಗುಣಮುಖರಾಗಿದ್ದಾರೆ. 10,882 ಸೋಂಕಿತರು ಮೃತಪಟ್ಟಿದ್ದಾರೆ.</p>.<p>ಸಾವಿನ ಪ್ರಕರಣ ವರದಿಯಾಗದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ʼದೆಹಲಿ ನಿವಾಸಿಗಳಿಗೆ ಸಿಹಿ ಸುದ್ದಿ. ಇಂದು ದೆಹಲಿಯಲ್ಲಿ ಕೋವಿಡ್-19ನಿಂದ ಒಂದೂ ಸಾವಿನ ಪ್ರಕರಣ ವರದಿಯಾಗಿಲ್ಲ. ದೆಹಲಿ ನಿವಾಸಿಗಳಿಗೆ ಅಭಿನಂದನೆಗಳು. ಕೊರೊನಾವೈರಸ್ ಪ್ರಕರಣಗಳು ಕಡಿಮೆಯಾಗುತ್ತಿವೆ. ಲಸಿಕೆ ಅಭಿಯಾನ ಉತ್ತಮ ವೇಗದಲ್ಲಿ ಸಾಗುತ್ತಿದೆ. ನಗರದ ನಿವಾಸಿಗಳೆಲ್ಲ ಕೊರೊನಾವೈರಸ್ ವಿರುದ್ಧ ತುಂಬಾ ಕಠಿಣವಾದ ಯುದ್ಧ ಮಾಡಿದ್ದೇವೆ.ಮುಂದೆಯೂ ಜಾಗರೂಕರಾಗಿರಬೇಕಿದೆʼ ಎಂದು ತಿಳಿಸಿದ್ದಾರೆ.</p>.<p>ದೆಹಲಿಯಲ್ಲಿ ಈವರೆಗೆ 1.11 ಕೋಟಿ ಜನರಿಗೆ ಕೋವಿಡ್-19 ಸೋಂಕು ಪರೀಕ್ಷೆ ನಡೆಸಲಾಗಿದೆ.</p>.<p>ದೇಶದಲ್ಲಿ ಇದುವರೆಗೆ ಒಟ್ಟು 1,05,48,521 ಸೋಂಕಿತರು ಚೇತರಿಸಿಕೊಂಡಿದ್ದು, 1,55,158 ಮಂದಿ ಮೃತಪಟ್ಟಿದ್ದಾರೆ. ಇನ್ನೂ 1,43,625 ಸಕ್ರಿಯ ಪ್ರಕರಣಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>