ದೇಶದಾದ್ಯಂತ ಎನ್ಆರ್ಸಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರವು ಯಾವುದಾದರೂ ಯೋಜನೆ ಹೊಂದಿದೆಯೇ ಎಂಬ ಬಗ್ಗೆ ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ‘ಈವರೆಗೆ ದೇಶದಾದ್ಯಂತ ಎನ್ಆರ್ಸಿಯನ್ನು ಸಿದ್ಧಪಡಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿಲ್ಲ’ ಎಂದು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.