<p><strong>ನವದೆಹಲಿ</strong>: ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲವೆಂದು ತಮ್ಮ ಕಂಪನಿಯ ಸತ್ಯ ಪರಿಶೀಲನಾ ತಂಡವು ದೃಢಪಡಿಸಿದೆ ಎಂದು ಫೇಸ್ಬುಕ್ ಇಂಡಿಯಾ ಮುಖ್ಯಸ್ಥ ಅಜಿತ್ ಮೋಹನ್ ತಿಳಿಸಿದ್ದಾರೆ. ಈ ವಿಚಾರವಾಗಿ ಸಂಸದೀಯ ಸಮಿತಿಗೆ ಬುಧವಾರ ಸ್ಪಷ್ಟನೆ ನೀಡಿದ್ದಾರೆ.</p>.<p>ಜೂನ್ ತಿಂಗಳಲ್ಲಿ ದೆಹಲಿಯ ಚರ್ಚ್ ಒಂದರ ಮೇಲೆ ದಾಳಿ ನಡೆಸಿದ ವಿಡಿಯೊ ಅನ್ನು ಬಜರಂಗದಳವು ಫೇಸ್ಬುಕ್ನಲ್ಲಿ ಹಂಚಿಕೊಂಡಿತ್ತು. ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ತಿಳಿದುಬಂದಿದ್ದರೂ, ಬಜರಂಗದಳವನ್ನು ನಿಷೇಧಿಸಲು ಫೇಸ್ಬುಕ್ ಹಿಂದೇಟು ಹಾಕಿತ್ತು.</p>.<p>ಬಜರಂಗದಳವನ್ನು ನಿಷೇಧಿಸಿದರೆ ಕಂಪನಿಯ ವ್ಯವಹಾರದ ಮೇಲೆ ದುಷ್ಪರಿಣಾಮ ಬೀರಬಹುದು ಎಂಬ ಆತಂಕ ಫೇಸ್ಬುಕ್ ಕಂಪನಿಗೆ ಇತ್ತೆಂದು ವಾಲ್ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು.</p>.<p>'ನಾಗರಿಕರ ದತ್ತಾಂಶ ಸುರಕ್ಷತೆ' ಬಗೆಗಿನ ವಿಚಾರಣೆಗೆ ಹಾಜರಾಗುವಂತೆ ಮಾಹಿತಿ ತಂತ್ರಜ್ಞಾನ ಸಂಸದೀಯ ಸ್ಥಾಯಿ ಸಮಿತಿಯು ಅಜಿತ್ ಮೋಹನ್ ಅವರಿಗೆ ಸೂಚಿಸಿತ್ತು.</p>.<p>ಕಾಂಗ್ರೆಸ್ ಮುಖಂಡ ಶಶಿ ತರೂರ್ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಂಸತ್ತಿನ ಮಾಹಿತಿ ತಂತ್ರಜ್ಞಾನ ಸಮಿತಿಯು ಬಜರಂಗದಳದ ವಿಚಾರವಾಗಿ ಫೇಸ್ಬುಕ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥರಿಗೆ ಪ್ರಶ್ನೆ ಮಾಡಿದೆ.</p>.<p>ಬಜರಂಗದಳದ ಪೋಸ್ಟ್ನಲ್ಲಿ ಯಾವುದೇ ವಿವಾದಾತ್ಮಕ ಅಂಶಗಳು ಕಂಡುಬಂದಿಲ್ಲ. ಆ ಕಾರಣ, ಸಂಘಟನೆಯನ್ನು ನಿಷೇಧಿಸಿಸುವ ಅನಿವಾರ್ಯತೆ ಫೇಸ್ಬುಕ್ ಇಂಡಿಯಾ ಕಂಪನಿಗೆ ಇರಲಿಲ್ಲವೆಂದು ಅಜಿತ್ ಮೋಹನ್ ಸಂಸದೀಯ ಸಮಿತಿಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲವೆಂದು ತಮ್ಮ ಕಂಪನಿಯ ಸತ್ಯ ಪರಿಶೀಲನಾ ತಂಡವು ದೃಢಪಡಿಸಿದೆ ಎಂದು ಫೇಸ್ಬುಕ್ ಇಂಡಿಯಾ ಮುಖ್ಯಸ್ಥ ಅಜಿತ್ ಮೋಹನ್ ತಿಳಿಸಿದ್ದಾರೆ. ಈ ವಿಚಾರವಾಗಿ ಸಂಸದೀಯ ಸಮಿತಿಗೆ ಬುಧವಾರ ಸ್ಪಷ್ಟನೆ ನೀಡಿದ್ದಾರೆ.</p>.<p>ಜೂನ್ ತಿಂಗಳಲ್ಲಿ ದೆಹಲಿಯ ಚರ್ಚ್ ಒಂದರ ಮೇಲೆ ದಾಳಿ ನಡೆಸಿದ ವಿಡಿಯೊ ಅನ್ನು ಬಜರಂಗದಳವು ಫೇಸ್ಬುಕ್ನಲ್ಲಿ ಹಂಚಿಕೊಂಡಿತ್ತು. ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ತಿಳಿದುಬಂದಿದ್ದರೂ, ಬಜರಂಗದಳವನ್ನು ನಿಷೇಧಿಸಲು ಫೇಸ್ಬುಕ್ ಹಿಂದೇಟು ಹಾಕಿತ್ತು.</p>.<p>ಬಜರಂಗದಳವನ್ನು ನಿಷೇಧಿಸಿದರೆ ಕಂಪನಿಯ ವ್ಯವಹಾರದ ಮೇಲೆ ದುಷ್ಪರಿಣಾಮ ಬೀರಬಹುದು ಎಂಬ ಆತಂಕ ಫೇಸ್ಬುಕ್ ಕಂಪನಿಗೆ ಇತ್ತೆಂದು ವಾಲ್ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು.</p>.<p>'ನಾಗರಿಕರ ದತ್ತಾಂಶ ಸುರಕ್ಷತೆ' ಬಗೆಗಿನ ವಿಚಾರಣೆಗೆ ಹಾಜರಾಗುವಂತೆ ಮಾಹಿತಿ ತಂತ್ರಜ್ಞಾನ ಸಂಸದೀಯ ಸ್ಥಾಯಿ ಸಮಿತಿಯು ಅಜಿತ್ ಮೋಹನ್ ಅವರಿಗೆ ಸೂಚಿಸಿತ್ತು.</p>.<p>ಕಾಂಗ್ರೆಸ್ ಮುಖಂಡ ಶಶಿ ತರೂರ್ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಂಸತ್ತಿನ ಮಾಹಿತಿ ತಂತ್ರಜ್ಞಾನ ಸಮಿತಿಯು ಬಜರಂಗದಳದ ವಿಚಾರವಾಗಿ ಫೇಸ್ಬುಕ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥರಿಗೆ ಪ್ರಶ್ನೆ ಮಾಡಿದೆ.</p>.<p>ಬಜರಂಗದಳದ ಪೋಸ್ಟ್ನಲ್ಲಿ ಯಾವುದೇ ವಿವಾದಾತ್ಮಕ ಅಂಶಗಳು ಕಂಡುಬಂದಿಲ್ಲ. ಆ ಕಾರಣ, ಸಂಘಟನೆಯನ್ನು ನಿಷೇಧಿಸಿಸುವ ಅನಿವಾರ್ಯತೆ ಫೇಸ್ಬುಕ್ ಇಂಡಿಯಾ ಕಂಪನಿಗೆ ಇರಲಿಲ್ಲವೆಂದು ಅಜಿತ್ ಮೋಹನ್ ಸಂಸದೀಯ ಸಮಿತಿಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>