ಬಿಹಾರ ಡಿಜಿಪಿ ಎಸ್.ಕೆ. ಸಿಂಘಾಲ್ ಮಂಗಳವಾರ ಹೊರಡಿಸಿರುವ ಸುತ್ತೋಲೆ ಪ್ರಕಾರ, ಬಿಹಾರದಲ್ಲಿ ಸರ್ಕಾರಿ ಕೆಲಸ ಪಡೆಯಲು ಗುಣನಡತೆ ಪ್ರಮಾಣಪತ್ರ ಕಡ್ಡಾಯವಾಗಲಿದೆ. ಅಲ್ಲದೆ, ಯಾವುದೇ ರೀತಿಯ ಹಿಂಸಾತ್ಮಕ ಪ್ರತಿಭಟನೆ, ಗುಂಪು ಗಲಭೆ, ರಸ್ತೆಯಲ್ಲಿ ಬಂದ್ ಮಾಡುವಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೆ, ಅಂಥವರು ಸರ್ಕಾರಿ ಉದ್ಯೋಗ ಪಡೆಯಲು ಅನರ್ಹರಾಗಿರುತ್ತಾರೆ.