<p><strong>ನವದೆಹಲಿ:</strong>ದೆಹಲಿ ಸರ್ಕಾರವು ಈ ಬಾರಿಯ ಗಣೇಶ ಚತುರ್ಥಿಯನ್ನು ಸರಳವಾಗಿ ಆಚರಿಸುವಂತೆ ಸಾರ್ವಜನಿಕರಿಗೆ ಸೂಚಿಸಿದ್ದು, ಸಮುದಾಯ ಆಚರಣೆ, ಸಾರ್ವಜನಿಕ ಸಭೆ ಮತ್ತು ವಿಗ್ರಹ ವಿಸರ್ಜನೆಗೆ ನಿಷೇಧ ಹೇರಿದೆ.</p>.<p>ಕೊರೊನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿದೆಹಲಿ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳ ಅಡಿಯಲ್ಲಿ, ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದನ್ನು ನಿರ್ಬಂಧಿಸಲಾಗಿದೆ. ಈ ಕಾರಣದಿಂದ ಗಣೇಶ ಚತುರ್ಥಿಯಂದು ಸಮುದಾಯ ಆಚರಣೆಗೆ ಅನುಮತಿ ನೀಡಿಲ್ಲಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ (ಡಿಪಿಸಿಸಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>2015ರಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು ಯಮುನಾ ನದಿಯಲ್ಲಿ ವಿಗ್ರಹ ವಿಸರ್ಜನೆಯನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು.</p>.<p>‘ಕಳೆದ ವರ್ಷ ದೆಹಲಿ ಸರ್ಕಾರವು ಗಣೇಶ ವಿಸರ್ಜನೆಗಾಗಿ ಕೃತಕ ಕೊಳಗಳನ್ನು ನಿರ್ಮಿಸಿತ್ತು. ಆದರೆ, ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದರೆ ಕೊರೊನಾ ವೈರಸ್ ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಗಣೇಶ ವಿಸರ್ಜನೆಯನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಘಿಸಿದಲ್ಲಿ ₹50,000 ದಂಡ ವಿಧಿಸಲಾಗುವುದು’ ಎಂದು ಅವರು ಹೇಳಿದರು.</p>.<p>ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಅನ್ಲಾಕ್–3 ಪ್ರಕ್ರಿಯೆ ಮಾರ್ಗಸೂಚಿಯಡಿ ಧಾರ್ಮಿಕ ಸಭೆ, ಸಾಮಾಜಿಕ ಸಭೆ, ಸಾರ್ವಜನಿಕ ಮೆರವಣಿಗೆಗಳಿಗೆ ನಿರ್ಬಂಧ ಹೇರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ದೆಹಲಿ ಸರ್ಕಾರವು ಈ ಬಾರಿಯ ಗಣೇಶ ಚತುರ್ಥಿಯನ್ನು ಸರಳವಾಗಿ ಆಚರಿಸುವಂತೆ ಸಾರ್ವಜನಿಕರಿಗೆ ಸೂಚಿಸಿದ್ದು, ಸಮುದಾಯ ಆಚರಣೆ, ಸಾರ್ವಜನಿಕ ಸಭೆ ಮತ್ತು ವಿಗ್ರಹ ವಿಸರ್ಜನೆಗೆ ನಿಷೇಧ ಹೇರಿದೆ.</p>.<p>ಕೊರೊನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿದೆಹಲಿ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳ ಅಡಿಯಲ್ಲಿ, ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದನ್ನು ನಿರ್ಬಂಧಿಸಲಾಗಿದೆ. ಈ ಕಾರಣದಿಂದ ಗಣೇಶ ಚತುರ್ಥಿಯಂದು ಸಮುದಾಯ ಆಚರಣೆಗೆ ಅನುಮತಿ ನೀಡಿಲ್ಲಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ (ಡಿಪಿಸಿಸಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>2015ರಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು ಯಮುನಾ ನದಿಯಲ್ಲಿ ವಿಗ್ರಹ ವಿಸರ್ಜನೆಯನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು.</p>.<p>‘ಕಳೆದ ವರ್ಷ ದೆಹಲಿ ಸರ್ಕಾರವು ಗಣೇಶ ವಿಸರ್ಜನೆಗಾಗಿ ಕೃತಕ ಕೊಳಗಳನ್ನು ನಿರ್ಮಿಸಿತ್ತು. ಆದರೆ, ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದರೆ ಕೊರೊನಾ ವೈರಸ್ ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಗಣೇಶ ವಿಸರ್ಜನೆಯನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಘಿಸಿದಲ್ಲಿ ₹50,000 ದಂಡ ವಿಧಿಸಲಾಗುವುದು’ ಎಂದು ಅವರು ಹೇಳಿದರು.</p>.<p>ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಅನ್ಲಾಕ್–3 ಪ್ರಕ್ರಿಯೆ ಮಾರ್ಗಸೂಚಿಯಡಿ ಧಾರ್ಮಿಕ ಸಭೆ, ಸಾಮಾಜಿಕ ಸಭೆ, ಸಾರ್ವಜನಿಕ ಮೆರವಣಿಗೆಗಳಿಗೆ ನಿರ್ಬಂಧ ಹೇರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>