<p><strong>ನವದೆಹಲಿ:</strong> ‘ಯಾವುದೇ ವರ್ಗದ ಜನರಿಗೆ ಮೀಸಲಾತಿ ನೀಡುವಂತೆ ನ್ಯಾಯಾಲಯವೊಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತಿಲ್ಲ’ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಹಾಗೂ ಬಿ.ವಿ.ನಾಗರತ್ನಾ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.</p>.<p>ಪಂಜಾಬ್ ರಾಜ್ಯದ ಸರ್ಕಾರಿ ವೈದ್ಯ ಮತ್ತು ದಂತ ವೈದ್ಯ ಕಾಲೇಜುಗಳಲ್ಲಿ ಕ್ರೀಡಾ ಕೋಟಾದಡಿ ಶೇ 3ರಷ್ಟು ಮೀಸಲಾತಿ ನೀಡುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ 2019ರ ಆಗಸ್ಟ್ನಲ್ಲಿ ನೀಡಿದ್ದ ಆದೇಶವನ್ನು ನ್ಯಾಯಪೀಠ ರದ್ದುಗೊಳಿಸಿತು.</p>.<p>‘ಯಾವುದೇ ವರ್ಗಕ್ಕೆ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಕ್ಕೆ ಇದೆ. ಈ ವಿಷಯವಾಗಿ ಕೋರ್ಟ್ ಆದೇಶ ನೀಡುವಂತಿಲ್ಲ. ಅಲ್ಲದೇ, ಮೀಸಲಾತಿಯನ್ನು ನೀಡಲೇಬೇಕು ಎಂದು ನ್ಯಾಯಾಲಯಗಳು ನಿರ್ದೇಶನ ನೀಡಬಾರದು’ ಎಂದು ನ್ಯಾಯಪೀಠ ಹೇಳಿದೆ.</p>.<p>‘ಇಂಥ ಆದೇಶ ನೀಡುವ ಮೂಲಕ ಹೈಕೋರ್ಟ್ ದೊಡ್ಡ ಪ್ರಮಾದ ಎಸಗಿದೆ ಹಾಗೂ ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿದೆ’ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಯಾವುದೇ ವರ್ಗದ ಜನರಿಗೆ ಮೀಸಲಾತಿ ನೀಡುವಂತೆ ನ್ಯಾಯಾಲಯವೊಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತಿಲ್ಲ’ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಹಾಗೂ ಬಿ.ವಿ.ನಾಗರತ್ನಾ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.</p>.<p>ಪಂಜಾಬ್ ರಾಜ್ಯದ ಸರ್ಕಾರಿ ವೈದ್ಯ ಮತ್ತು ದಂತ ವೈದ್ಯ ಕಾಲೇಜುಗಳಲ್ಲಿ ಕ್ರೀಡಾ ಕೋಟಾದಡಿ ಶೇ 3ರಷ್ಟು ಮೀಸಲಾತಿ ನೀಡುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ 2019ರ ಆಗಸ್ಟ್ನಲ್ಲಿ ನೀಡಿದ್ದ ಆದೇಶವನ್ನು ನ್ಯಾಯಪೀಠ ರದ್ದುಗೊಳಿಸಿತು.</p>.<p>‘ಯಾವುದೇ ವರ್ಗಕ್ಕೆ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಕ್ಕೆ ಇದೆ. ಈ ವಿಷಯವಾಗಿ ಕೋರ್ಟ್ ಆದೇಶ ನೀಡುವಂತಿಲ್ಲ. ಅಲ್ಲದೇ, ಮೀಸಲಾತಿಯನ್ನು ನೀಡಲೇಬೇಕು ಎಂದು ನ್ಯಾಯಾಲಯಗಳು ನಿರ್ದೇಶನ ನೀಡಬಾರದು’ ಎಂದು ನ್ಯಾಯಪೀಠ ಹೇಳಿದೆ.</p>.<p>‘ಇಂಥ ಆದೇಶ ನೀಡುವ ಮೂಲಕ ಹೈಕೋರ್ಟ್ ದೊಡ್ಡ ಪ್ರಮಾದ ಎಸಗಿದೆ ಹಾಗೂ ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿದೆ’ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>