<p><strong>ಶ್ರೀನಗರ</strong>:ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿ ಎರಡು ವರ್ಷ ಪೂರ್ಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಗುಪ್ಕಾರ್ ಒಕ್ಕೂಟದ ನಾಯಕರು ಗುರುವಾರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ಮನೆಯಲ್ಲಿ ಸಭೆ ನಡೆಸಿದರು.</p>.<p>ವಿಶೇಷ ಸ್ಥಾನಮಾನ ರದ್ದತಿಯ ಬಳಿಕ ಕಾಶ್ಮೀರ ಕಣಿವೆಯಲ್ಲಿನ ಪರಿಸ್ಥಿತಿಗಳು ಹಾಗೂ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲಾಯಿತು ಎಂದು ಸಂಘಟನೆಯ ನಾಯಕರೊಬ್ಬರು ತಿಳಿಸಿದರು.</p>.<p>ಸಭೆಯಲ್ಲಿ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಸಿಪಿಎಂ ನಾಯಕ ಎಂ.ವೈ.ತಾರಿಗಾಮಿ, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ನ ಹಿರಿಯ ಉಪಾಧ್ಯಕ್ಷ ಮುಜಾಫರ್ ಷಾ ಇದ್ದರು.</p>.<p>ಮುಫ್ತಿ ಬೇಸರ‘‘ನಾಗರಿಕರ ಮೇಲೆ ಅನಿಯಂತ್ರಿತ ದಬ್ಬಾಳಿಕೆ ನಡೆದಾಗ, ಸಮಾಜದಲ್ಲಿ ಅನ್ಯಾಯ ಸಂಭವಿಸಿದಾಗ, ಅಸ್ತಿತ್ವ ಉಳಿಸಿಕೊಳ್ಳಲು ಜನರಿಗೆ ವಿರೋಧಿಸುವುದನ್ನು ಬಿಟ್ಟು ಬೇರೆ ಆಯ್ಕೆ ಇಲ್ಲ‘ ಎಂದು ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿದ್ದಾರೆ.</p>.<p>‘ಜಮ್ಮು ಮತ್ತು ಕಾಶ್ಮೀರದ ಇತಿಹಾಸದಲ್ಲಿ ಆಗಸ್ಟ್ 5 ಎನ್ನುವುದು ಒಂದು ನಕಾರಾತ್ಮಕ ಮೈಲುಗಲ್ಲು. ಅದು ಕಣಿವೆ ರಾಜ್ಯದ ಜನರಿಗಾದ ರಾಜಕೀಯ ಮತ್ತು ಮಾನಸಿಕ ಹಿನ್ನಡೆ‘ ಎಂದು ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಕಾನ್ಫರೆನ್ಸ್ನ ಖುರ್ಷಿದ್ ಆಲಂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>:ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿ ಎರಡು ವರ್ಷ ಪೂರ್ಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಗುಪ್ಕಾರ್ ಒಕ್ಕೂಟದ ನಾಯಕರು ಗುರುವಾರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ಮನೆಯಲ್ಲಿ ಸಭೆ ನಡೆಸಿದರು.</p>.<p>ವಿಶೇಷ ಸ್ಥಾನಮಾನ ರದ್ದತಿಯ ಬಳಿಕ ಕಾಶ್ಮೀರ ಕಣಿವೆಯಲ್ಲಿನ ಪರಿಸ್ಥಿತಿಗಳು ಹಾಗೂ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲಾಯಿತು ಎಂದು ಸಂಘಟನೆಯ ನಾಯಕರೊಬ್ಬರು ತಿಳಿಸಿದರು.</p>.<p>ಸಭೆಯಲ್ಲಿ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಸಿಪಿಎಂ ನಾಯಕ ಎಂ.ವೈ.ತಾರಿಗಾಮಿ, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ನ ಹಿರಿಯ ಉಪಾಧ್ಯಕ್ಷ ಮುಜಾಫರ್ ಷಾ ಇದ್ದರು.</p>.<p>ಮುಫ್ತಿ ಬೇಸರ‘‘ನಾಗರಿಕರ ಮೇಲೆ ಅನಿಯಂತ್ರಿತ ದಬ್ಬಾಳಿಕೆ ನಡೆದಾಗ, ಸಮಾಜದಲ್ಲಿ ಅನ್ಯಾಯ ಸಂಭವಿಸಿದಾಗ, ಅಸ್ತಿತ್ವ ಉಳಿಸಿಕೊಳ್ಳಲು ಜನರಿಗೆ ವಿರೋಧಿಸುವುದನ್ನು ಬಿಟ್ಟು ಬೇರೆ ಆಯ್ಕೆ ಇಲ್ಲ‘ ಎಂದು ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿದ್ದಾರೆ.</p>.<p>‘ಜಮ್ಮು ಮತ್ತು ಕಾಶ್ಮೀರದ ಇತಿಹಾಸದಲ್ಲಿ ಆಗಸ್ಟ್ 5 ಎನ್ನುವುದು ಒಂದು ನಕಾರಾತ್ಮಕ ಮೈಲುಗಲ್ಲು. ಅದು ಕಣಿವೆ ರಾಜ್ಯದ ಜನರಿಗಾದ ರಾಜಕೀಯ ಮತ್ತು ಮಾನಸಿಕ ಹಿನ್ನಡೆ‘ ಎಂದು ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಕಾನ್ಫರೆನ್ಸ್ನ ಖುರ್ಷಿದ್ ಆಲಂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>