‘ಕೋವಿಡ್ ಸಾವುಗಳನ್ನು ವರದಿ ಮಾಡಲು ವಿವರವಾದ ಮಾರ್ಗಸೂಚಿಗಳನ್ನು ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಿದೆ. ಅದರಂತೆ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿಯಮಿತವಾಗಿ ವರದಿ ಮಾಡುತ್ತಿವೆ. ಆದರೂ, ಆಮ್ಲಜನಕದ ಕೊರತೆಯಿಂದಾಗಿ ಯಾವುದೇ ಸಾವುಗಳು ಸಂಭವಿಸಿರುವ ಬಗ್ಗೆ ನಿರ್ದಿಷ್ಟವಾಗಿ ವರದಿ ಬಂದಿಲ್ಲ.’ ಎಂದು ಪವಾರ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.