ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಂಜಾಬ್ ರಾಜ್ಯಪಾಲರಿಂದ ಚಂಡೀಗಡದ ಆಡಳಿತಾಧಿಕಾರಿ ಜವಾಬ್ದಾರಿ ಹಿಂತೆಗೆಯಲ್ಲ’

Last Updated 13 ಆಗಸ್ಟ್ 2021, 15:35 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್ ರಾಜ್ಯಪಾಲರಿಗಿರುವ ಚಂಡೀಗಡದ ಆಡಳಿತಾಧಿಕಾರಿಯ ಜವಾಬ್ದಾರಿಯನ್ನು ಹಿಂತೆಗೆದುಕೊಳ್ಳುವ ಯಾವುದೇ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ಸ್ಪಷ್ಟಪಡಿಸಿದೆ.

ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ವಿಚಾರ ಪ್ರಸ್ತಾಪಿಸಿದ್ದಾರೆ ಎನ್ನುವುದನ್ನು ಗೃಹ ಸಚಿವಾಲಯ ನಿರಾಕರಿಸಿದ್ದು, ಚಂಡೀಗಡದ ಆಡಳಿತಾಧಿಕಾರಿಯ ಜವಾಬ್ದಾರಿಯನ್ನು ಹಿಂತೆಗೆದುಕೊಳ್ಳುವ ಆತಂಕವು ಆಧಾರರಹಿತ ಎಂದಿದೆ.

ಗುರುವಾರ ಸರಣಿ ಟ್ವೀಟ್‌ ಮಾಡಿರುವ ಬಾದಲ್‌, ಪಂಜಾಬ್ ರಾಜ್ಯಪಾಲರನ್ನು ಉಸ್ತುವಾರಿ ಮಾಡುವ ಮೂಲಕ ಚಂಡೀಗಡಕ್ಕೆ ಪೂರ್ಣ ಪ್ರಮಾಣದ ಆಡಳಿತಾಧಿಕಾರಿಯನ್ನು ನೇಮಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪರಿಶೀಲಿಸುವಂತೆ ಅಮಿತ್‌ ಶಾ ಅವರನ್ನು ವಿನಂತಿಸಲಾಗಿದೆ ಎಂದು ಹೇಳಿದ್ದಾರೆ.

ಬಾದಲ್ ಟ್ವೀಟ್‌ನಲ್ಲಿ ವ್ಯಕ್ತಪಡಿಸಿರುವ ಆತಂಕವು ಆಧಾರರಹಿತವಾಗಿದೆ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

‘ಪಂಜಾಬ್ ರಾಜ್ಯಪಾಲರನ್ನು ಚಂಡೀಗಡದ ಆಡಳಿತಾಧಿಕಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸುವ ಯಾವುದೇ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ; ಅಂತಹ ಯಾವುದೇ ಪ್ರಸ್ತಾಪವೂ ಕೇಂದ್ರದ ಮುಂದಿಲ್ಲ. ಸುಖಬೀರ್ ಸಿಂಗ್ ಬಾದಲ್ ಅವರು ಈ ವಿಷಯವನ್ನೂ ಕೇಂದ್ರ ಗೃಹ ಸಚಿವರ ಎದುರು ಪ್ರಸ್ತಾಪಿಸಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ’ ಎಂದು ವಕ್ತಾರರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT