ವಲಸೆ ಕಾರ್ಮಿಕರು ಸ್ವಂತ ಊರುಗಳಿಗೆ ಮರಳಲು ಸಾಕಷ್ಟು ಸಂಖ್ಯೆಯಲ್ಲಿ ರೈಲುಗಳ ಸೇವೆ ದೊರೆಯುತ್ತಿಲ್ಲ ಎನ್ನುವ ಮಾಧ್ಯಮ ವರದಿಗಳನ್ನು ರೈಲ್ವೆ ಮಂಡಳಿಯ ಅಧ್ಯಕ್ಷ ಸುನೀತ್ ಶರ್ಮಾ, ದಕ್ಷಿಣ ರೈಲ್ವೆಯ ಜನರಲ್ ಮ್ಯಾನೇಜರ್ ಜಾನ್ ಥಾಮಸ್, ಉತ್ತರ ಮತ್ತು ಕೇಂದ್ರ ರೈಲ್ವೆ ವಿಭಾಗದ ಮುಖ್ಯ ಜನಸಂಪರ್ಕ ಅಧಿಕಾರಿಗಳು (ಸಿಪಿಆರ್ಗಳು) ಸೇರಿ ಹಲವು ಅಧಿಕಾರಿಗಳು ಅಲ್ಲಗಳೆದಿದ್ದಾರೆ.