ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಕ್ಕೆ ತಿರುಗೇಟು ನೀಡಿರುವ ವಿಜಯವರ್ಗೀಯ, ಈ ಅಸಂಬದ್ಧ ವಾದಗಳಿಂದ ಯಾವುದೇ ನೆರವಾಗುವುದಿಲ್ಲ. ಕುತೂಹಲಕಾರಿ ಅಂಶವೆಂದರೆ ದೀದಿ ಚುನಾವಣೆ ಗೆದ್ದಾಗ ಯಾವುದೇ ಸಮಸ್ಯೆಯಿರಲಿಲ್ಲ. ಚುನಾವಣಾ ಗೆದ್ದಾಗ ಎಲ್ಲವೂ ಸರಿಯಾಗಿಯೇ ಇರುತ್ತದೆ. ಆದರೆ ಒಮ್ಮೆ ಸೋಲನ್ನು ಗ್ರಹಿಸಲು ಪ್ರಾರಂಭಿಸಿದ ಬಳಿಕ ನೀವು ಚುನಾವಣಾ ಆಯೋಗದ ವಿರುದ್ಧ ಆರೋಪ ಹೊರಿಸುತ್ತಿದ್ದು, ಮತಯಂತ್ರಗಳನ್ನು ದೂಷಿಸುತ್ತಿದ್ದೀರಿ ಎಂದು ಆರೋಪಿಸಿದ್ದಾರೆ.