<p class="bodytext"><strong>ಆಗ್ರಾ: </strong>ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ 22 ರೋಗಿಗಳ ಸಾವಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ವೈದ್ಯರ ತಂಡ, ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆ ಕಡಿತಗೊಂಡಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳುವ ಮೂಲಕ ಕ್ಲೀನ್ ಚೀಟ್ ನೀಡಿದೆ.</p>.<p class="bodytext">ಪರಸ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಆಮ್ಲಜನಕ ಪೂರೈಕೆಯನ್ನು ಕಡಿತಗೊಳಿಸುವ ಅಣಕು ಪ್ರದರ್ಶನವನ್ನು ಆಸ್ಪತ್ರೆಯ ಮಾಲೀಕರು ಮಾಡಿದ್ದರು ಎಂದು ಹೇಳಲಾಗಿದ್ದ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಆಗ್ರಾ ಜಿಲ್ಲಾಡಳಿತ ತನಿಖೆಗೆ ಆದೇಶಿಸಿತ್ತು.</p>.<p class="bodytext">ವೀಡಿಯೊದಲ್ಲಿ, ಆಸ್ಪತ್ರೆಯ ಮಾಲೀಕ ಡಾ.ಅರಿಂಜಯ್ ಜೈನ್, ಆಮ್ಲಜನಕದ ಪೂರೈಕೆಯನ್ನು ಸ್ಥಗಿತಗೊಳಿಸಿದ ನಂತರ 22 ರೋಗಿಗಳ ದೇಹಗಳು ನೀಲಿ ಬಣ್ಣಕ್ಕೆ ತಿರುಗಲು ಆರಂಭಿಸಿದವು ಎಂದು ಹೇಳಿದ್ದರು.</p>.<p class="bodytext">ವೈದ್ಯರ ಸಮಿತಿಯು ಜಿಲ್ಲಾ ಅಧಿಕಾರಿಗಳಿಗೆ ಸಲ್ಲಿಸಿದ ವಿಚಾರಣಾ ವರದಿಯಲ್ಲಿ, ಆಸ್ಪತ್ರೆಯಲ್ಲಿ 5 ನಿಮಿಷ ಆಮ್ಲಜನಕ ಕಡಿತದ ಅಣಕು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಯಾವುದೇ ಪುರಾವೆಗಳಿಲ್ಲ ಎಂದು ಉಲ್ಲೇಖಿಸಿದೆ.</p>.<p class="bodytext">ಏಪ್ರಿಲ್ 26–27ರಂದು ಸಹ ಆಸ್ಪತ್ರೆಯಲ್ಲಿ ಕಾಯಿಲೆ ಮತ್ತು ಇತರ ಸಮಸ್ಯೆಗಳಿಂದ 16 ರೋಗಿಗಳು ಮೃತಪಟ್ಟಿದ್ದಾರೆ ಎಂದು ಸಮಿತಿ ವರದಿಯಲ್ಲಿ ತಿಳಿಸಿದೆ.</p>.<p class="bodytext">ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಆಸ್ಪತ್ರೆಯನ್ನು ಮುಚ್ಚಿಸಿ, ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಆಗ್ರಾ: </strong>ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ 22 ರೋಗಿಗಳ ಸಾವಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ವೈದ್ಯರ ತಂಡ, ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆ ಕಡಿತಗೊಂಡಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳುವ ಮೂಲಕ ಕ್ಲೀನ್ ಚೀಟ್ ನೀಡಿದೆ.</p>.<p class="bodytext">ಪರಸ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಆಮ್ಲಜನಕ ಪೂರೈಕೆಯನ್ನು ಕಡಿತಗೊಳಿಸುವ ಅಣಕು ಪ್ರದರ್ಶನವನ್ನು ಆಸ್ಪತ್ರೆಯ ಮಾಲೀಕರು ಮಾಡಿದ್ದರು ಎಂದು ಹೇಳಲಾಗಿದ್ದ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಆಗ್ರಾ ಜಿಲ್ಲಾಡಳಿತ ತನಿಖೆಗೆ ಆದೇಶಿಸಿತ್ತು.</p>.<p class="bodytext">ವೀಡಿಯೊದಲ್ಲಿ, ಆಸ್ಪತ್ರೆಯ ಮಾಲೀಕ ಡಾ.ಅರಿಂಜಯ್ ಜೈನ್, ಆಮ್ಲಜನಕದ ಪೂರೈಕೆಯನ್ನು ಸ್ಥಗಿತಗೊಳಿಸಿದ ನಂತರ 22 ರೋಗಿಗಳ ದೇಹಗಳು ನೀಲಿ ಬಣ್ಣಕ್ಕೆ ತಿರುಗಲು ಆರಂಭಿಸಿದವು ಎಂದು ಹೇಳಿದ್ದರು.</p>.<p class="bodytext">ವೈದ್ಯರ ಸಮಿತಿಯು ಜಿಲ್ಲಾ ಅಧಿಕಾರಿಗಳಿಗೆ ಸಲ್ಲಿಸಿದ ವಿಚಾರಣಾ ವರದಿಯಲ್ಲಿ, ಆಸ್ಪತ್ರೆಯಲ್ಲಿ 5 ನಿಮಿಷ ಆಮ್ಲಜನಕ ಕಡಿತದ ಅಣಕು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಯಾವುದೇ ಪುರಾವೆಗಳಿಲ್ಲ ಎಂದು ಉಲ್ಲೇಖಿಸಿದೆ.</p>.<p class="bodytext">ಏಪ್ರಿಲ್ 26–27ರಂದು ಸಹ ಆಸ್ಪತ್ರೆಯಲ್ಲಿ ಕಾಯಿಲೆ ಮತ್ತು ಇತರ ಸಮಸ್ಯೆಗಳಿಂದ 16 ರೋಗಿಗಳು ಮೃತಪಟ್ಟಿದ್ದಾರೆ ಎಂದು ಸಮಿತಿ ವರದಿಯಲ್ಲಿ ತಿಳಿಸಿದೆ.</p>.<p class="bodytext">ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಆಸ್ಪತ್ರೆಯನ್ನು ಮುಚ್ಚಿಸಿ, ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>