ನವದೆಹಲಿ: ದೇಶದಲ್ಲಿನ ಈಗಿರುವ ನೀತಿಯು ನ್ಯಾಯಾಂಗದಲ್ಲಿ ಮೀಸಲಾತಿಗೆ ಅವಕಾಶ ನೀಡುವುದಿಲ್ಲ. ಆದರೆ ನ್ಯಾಯಾಧೀಶರು, ವಿಶೇಷವಾಗಿ ಕೊಲಿಜಿಯಂ ಸದಸ್ಯರು, ನ್ಯಾಯಾಧೀಶರ ನೇಮಕಾತಿಗಾಗಿ ಶಿಫಾರಸು ಮಾಡುವಾಗ ಈ ವ್ಯವಸ್ಥೆಯಲ್ಲಿ ಸಮರ್ಪಕ ಪ್ರಾತಿನಿಧ್ಯ ಪಡೆಯದ ಸಮುದಾಯ, ವರ್ಗಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಗುರುವಾರ ಸಂಸತ್ತಿಗೆ ತಿಳಿಸಿದೆ.