‘ಭಾರಿ ಸಂಖ್ಯೆಯಲ್ಲಿ ಒಂದೆಡೆ ಸೇರುವುದು, ಪೆಂಡಾಲ್ ಅಳವಡಿಸುವುದು ಬೇಡ. ಮನೆಯಲ್ಲಿಯೇ ಇದ್ದು, ನಿಮ್ಮ ಕುಟುಂಬದ ಸದಸ್ಯರು, ಆತ್ಮೀಯರೊಂದಿಗೆ ಹಬ್ಬಗಳನ್ನು ಆಚರಿಸಿ. ಕೊರೊನಾ ವೈರಸ್ ವಿರುದ್ಧ ಹೋರಾಡುವುದೇ ಪ್ರತಿಯೊಬ್ಬರ ಧರ್ಮವಾಗಬೇಕು. ಕೋವಿಡ್ನಿಂದ ಸಾವು ಸಂಭವಿಸುವುದನ್ನು ನಿಯಂತ್ರಿಸುವುದು ಆರೋಗ್ಯ ಸಚಿವನಾಗಿ ನನ್ನ ಧರ್ಮವಾಗಿದೆ’ ಎಂದೂ ಹೇಳಿದರು.