<p><strong>ನವದೆಹಲಿ: </strong>ಗಣರಾಜ್ಯೋತ್ಸವ ಪರೇಡ್ನಲ್ಲಿ ಕೇರಳ, ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ರಾಜ್ಯಗಳ ಸ್ತಬ್ಧಚಿತ್ರಗಳನ್ನು ಸೇರಿಸದಿರಲು ಕೈಗೊಂಡಿರುವ ನಿರ್ಧಾರದ ಮರುಪರಿಶೀಲನೆ ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.</p>.<p>ಗಣರಾಜ್ಯೋತ್ಸವ ದಿನ ನಡೆಯುವ ಪರೇಡ್ನಲ್ಲಿಸ್ತಬ್ಧಚಿತ್ರಗಳ ಪ್ರದರ್ಶನಕ್ಕಾಗಿ 12 ರಾಜ್ಯಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.</p>.<p>ತಮ್ಮ ರಾಜ್ಯಗಳ ಸ್ತಬ್ಧಚಿತ್ರಗಳಿಗೆ ಅವಕಾಶ ನೀಡದಿರುವ ಕುರಿತು ಈ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಆಕ್ಷೇಪಿಸಿರುವುದು ಹಾಗೂ ಈ ವಿಷಯ ಕುರಿತು ಸೃಷ್ಟಿಯಾಗಿರುವ ವಿವಾದದ ಹಿನ್ನೆಲೆಯಲ್ಲಿ ಸಚಿವಾಲಯದ ಅಧಿಕಾರಿಗಳಿಂದ ಈ ಸ್ಪಷ್ಟನೆ ಹೊರಬಿದ್ದಿದೆ.</p>.<p>ಈ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರುಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಹಾಗೂ ಎಂ.ಕೆ.ಸ್ಟಾಲಿನ್ ಒತ್ತಾಯಿಸಿದ್ದರು.</p>.<p>ಈ ಮೂರು ರಾಜ್ಯಗಳ ಸ್ತಬ್ಧಚಿತ್ರಗಳನ್ನು ಗಣರಾಜ್ಯೋತ್ಸವ ಪರೇಡ್ಗೆ ಪರಿಗಣಿಸದಿರುವುದು ಕೇಂದ್ರ ಸರ್ಕಾರ ಮಾಡಿರುವ ‘ಅವಮಾನ’ ಎಂದು ಕೆಲ ಬಿಜೆಪಿಯೇತರ ಪಕ್ಷಗಳ ಆಡಳಿತ ಇರುವ ರಾಜ್ಯಗಳು ಆರೋಪಿಸಿವೆ.</p>.<p>‘ಈ ಮೂರು ರಾಜ್ಯಗಳ ಮನವಿಗಳನ್ನು ಪರಿಗಣಿಸಲು ಸಾಧ್ಯವಿಲ್ಲ. ಸ್ತಬ್ಧಚಿತ್ರಗಳ ಆಯ್ಕೆಗೆ ಸಂಬಂಧಿಸಿ ಅನುಸರಿಸುವ ಸುದೀರ್ಘ ಪ್ರಕ್ರಿಯೆ ಕುರಿತ ವಿವರಣೆಯೊಂದಿಗೆ ಈ ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಉತ್ತರವನ್ನೂ ನೀಡಲಾಗಿದೆ’ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಸ್ತಬ್ಧಚಿತ್ರಗಳ ಆಯ್ಕೆಗೆ ಸಂಬಂಧಿಸಿ ತಜ್ಞರನ್ನು ಒಳಗೊಂಡ ಸಮಿತಿ ಬಹಳ ಮುಂಚಿತವಾಗಿಯೇ ನಿರ್ಧಾರ ಕೈಗೊಂಡಿರುತ್ತದೆ. ಅಲ್ಲದೇ, ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಲು ಸಹ ಸಾಕಷ್ಟು ಸಮಯ ಬೇಕು. ಹೀಗಾಗಿ, ಈ ಕುರಿತ ನಿರ್ಧಾರವನ್ನು ಪರಿಷ್ಕರಿಸಲು ಸಾಧ್ಯವಿಲ್ಲ’ ಎಂದೂ ಹೇಳಿದರು.</p>.<p>12 ರಾಜ್ಯಗಳ ಮಾದರಿಗಳ ಜೊತೆಗೆ, ಸಚಿವಾಲಯಗಳು ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳ ಒಟ್ಟು 9 ಸ್ತಬ್ಧಚಿತ್ರಗಳನ್ನು ಸಹ ಈ ಬಾರಿ ಪರೇಡ್ನಲ್ಲಿ ಪ್ರದರ್ಶಿಸಲಾಗುವುದು ಎಂದರು.</p>.<p class="Briefhead"><strong>ಮಾರ್ಗಸೂಚಿಗಳ ಅನುಸಾರ ಆಯ್ಕೆ: ರಾಜನಾಥ್ ಸಿಂಗ್</strong></p>.<p><strong>ನವದೆಹಲಿ/ಕೋಲ್ಕತ್ತ: </strong>‘ನಿಗದಿ ಮಾಡಿದ ಮಾರ್ಗಸೂಚಿಗಳ ಅನುಸಾರವೇ ಈ ವರ್ಷದ ಗಣರಾಜ್ಯೋತ್ಸವ ಪರೇಡ್ಗೆ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. ತಮಿಳುನಾಡಿನ ಪ್ರಸ್ತಾವನೆ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆಯಲಿಲ್ಲ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಮಂಗಳವಾರ ಹೇಳಿದ್ದಾರೆ.</p>.<p>ಈ ಕುರಿತು ಸ್ಟಾಲಿನ್ ಅವರಿಗೆ ಪತ್ರ ಬರೆದಿರುವ ಅವರು, ‘ಮೊದಲ ಮೂರು ಸುತ್ತುಗಳಲ್ಲಿ ರಾಜ್ಯದ ಪ್ರಸ್ತಾವನೆಯನ್ನು ಪರಿಗಣಿಸಲಾಗಿತ್ತು’ ಎಂದು ವಿವರಿಸಿದ್ದಾರೆ.</p>.<p>‘ಆಯಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವವರನ್ನು ಒಳಗೊಂಡ ಸಮಿತಿ ಸರಣಿ ಸಭೆಗಳನ್ನು ನಡೆಸುತ್ತದೆ. ಸ್ತಬ್ಧಚಿತ್ರದ ಪರಿಕಲ್ಪನೆ, ವಿನ್ಯಾಸ ಮತ್ತಿತರ ಅಂಶಗಳ ಆಧಾರದ ಮೇಲೆ ಸಮಿತಿಯು ರಾಜ್ಯಗಳು ಸಲ್ಲಿಸುವ ಪ್ರಸ್ತಾವನೆಗಳನ್ನು ಪರಿಶೀಲಿಸಿ, ಶಿಫಾರಸು ಮಾಡುತ್ತದೆ’ ಎಂದೂ ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>ಇದೇ ವಿಷಯವಾಗಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೂ ಸಚಿವ ರಾಜನಾಥ್ ಸಿಂಗ್ ಪತ್ರ ಬರೆದು, ಆ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗದಿರುವ ಕುರಿತು ವಿವರಿಸಿದ್ದಾರೆ.</p>.<p>‘ನೇತಾಜಿ ಸುಭಾಶ್ಚಂದ್ರ ಬೋಸ್ ಕುರಿತ ಸ್ತಬ್ಧಚಿತ್ರವನ್ನು ಕೇಂದ್ರೀಯ ಲೋಕೋಪಯೋಗಿ ಇಲಾಖೆ ಸಲ್ಲಿಸಿತ್ತು. ಹೀಗಾಗಿ ನೇತಾಜಿ ಅವರಿಗೆ ಸಂಬಂಧಿಸಿದ್ದ ಸ್ತಬ್ಧಚಿತ್ರ ಒಳಗೊಂಡಿದ್ದ ಪಶ್ಚಿಮ ಬಂಗಾಳದ ಪ್ರಸ್ತಾವನೆಯನ್ನು ಪರೇಡ್ಗೆ ಪರಿಗಣಿಸಲಿಲ್ಲ’ ಎಂದು ಪತ್ರದಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಗಣರಾಜ್ಯೋತ್ಸವ ಪರೇಡ್ನಲ್ಲಿ ಕೇರಳ, ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ರಾಜ್ಯಗಳ ಸ್ತಬ್ಧಚಿತ್ರಗಳನ್ನು ಸೇರಿಸದಿರಲು ಕೈಗೊಂಡಿರುವ ನಿರ್ಧಾರದ ಮರುಪರಿಶೀಲನೆ ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.</p>.<p>ಗಣರಾಜ್ಯೋತ್ಸವ ದಿನ ನಡೆಯುವ ಪರೇಡ್ನಲ್ಲಿಸ್ತಬ್ಧಚಿತ್ರಗಳ ಪ್ರದರ್ಶನಕ್ಕಾಗಿ 12 ರಾಜ್ಯಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.</p>.<p>ತಮ್ಮ ರಾಜ್ಯಗಳ ಸ್ತಬ್ಧಚಿತ್ರಗಳಿಗೆ ಅವಕಾಶ ನೀಡದಿರುವ ಕುರಿತು ಈ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಆಕ್ಷೇಪಿಸಿರುವುದು ಹಾಗೂ ಈ ವಿಷಯ ಕುರಿತು ಸೃಷ್ಟಿಯಾಗಿರುವ ವಿವಾದದ ಹಿನ್ನೆಲೆಯಲ್ಲಿ ಸಚಿವಾಲಯದ ಅಧಿಕಾರಿಗಳಿಂದ ಈ ಸ್ಪಷ್ಟನೆ ಹೊರಬಿದ್ದಿದೆ.</p>.<p>ಈ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರುಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಹಾಗೂ ಎಂ.ಕೆ.ಸ್ಟಾಲಿನ್ ಒತ್ತಾಯಿಸಿದ್ದರು.</p>.<p>ಈ ಮೂರು ರಾಜ್ಯಗಳ ಸ್ತಬ್ಧಚಿತ್ರಗಳನ್ನು ಗಣರಾಜ್ಯೋತ್ಸವ ಪರೇಡ್ಗೆ ಪರಿಗಣಿಸದಿರುವುದು ಕೇಂದ್ರ ಸರ್ಕಾರ ಮಾಡಿರುವ ‘ಅವಮಾನ’ ಎಂದು ಕೆಲ ಬಿಜೆಪಿಯೇತರ ಪಕ್ಷಗಳ ಆಡಳಿತ ಇರುವ ರಾಜ್ಯಗಳು ಆರೋಪಿಸಿವೆ.</p>.<p>‘ಈ ಮೂರು ರಾಜ್ಯಗಳ ಮನವಿಗಳನ್ನು ಪರಿಗಣಿಸಲು ಸಾಧ್ಯವಿಲ್ಲ. ಸ್ತಬ್ಧಚಿತ್ರಗಳ ಆಯ್ಕೆಗೆ ಸಂಬಂಧಿಸಿ ಅನುಸರಿಸುವ ಸುದೀರ್ಘ ಪ್ರಕ್ರಿಯೆ ಕುರಿತ ವಿವರಣೆಯೊಂದಿಗೆ ಈ ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಉತ್ತರವನ್ನೂ ನೀಡಲಾಗಿದೆ’ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಸ್ತಬ್ಧಚಿತ್ರಗಳ ಆಯ್ಕೆಗೆ ಸಂಬಂಧಿಸಿ ತಜ್ಞರನ್ನು ಒಳಗೊಂಡ ಸಮಿತಿ ಬಹಳ ಮುಂಚಿತವಾಗಿಯೇ ನಿರ್ಧಾರ ಕೈಗೊಂಡಿರುತ್ತದೆ. ಅಲ್ಲದೇ, ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಲು ಸಹ ಸಾಕಷ್ಟು ಸಮಯ ಬೇಕು. ಹೀಗಾಗಿ, ಈ ಕುರಿತ ನಿರ್ಧಾರವನ್ನು ಪರಿಷ್ಕರಿಸಲು ಸಾಧ್ಯವಿಲ್ಲ’ ಎಂದೂ ಹೇಳಿದರು.</p>.<p>12 ರಾಜ್ಯಗಳ ಮಾದರಿಗಳ ಜೊತೆಗೆ, ಸಚಿವಾಲಯಗಳು ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳ ಒಟ್ಟು 9 ಸ್ತಬ್ಧಚಿತ್ರಗಳನ್ನು ಸಹ ಈ ಬಾರಿ ಪರೇಡ್ನಲ್ಲಿ ಪ್ರದರ್ಶಿಸಲಾಗುವುದು ಎಂದರು.</p>.<p class="Briefhead"><strong>ಮಾರ್ಗಸೂಚಿಗಳ ಅನುಸಾರ ಆಯ್ಕೆ: ರಾಜನಾಥ್ ಸಿಂಗ್</strong></p>.<p><strong>ನವದೆಹಲಿ/ಕೋಲ್ಕತ್ತ: </strong>‘ನಿಗದಿ ಮಾಡಿದ ಮಾರ್ಗಸೂಚಿಗಳ ಅನುಸಾರವೇ ಈ ವರ್ಷದ ಗಣರಾಜ್ಯೋತ್ಸವ ಪರೇಡ್ಗೆ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. ತಮಿಳುನಾಡಿನ ಪ್ರಸ್ತಾವನೆ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆಯಲಿಲ್ಲ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಮಂಗಳವಾರ ಹೇಳಿದ್ದಾರೆ.</p>.<p>ಈ ಕುರಿತು ಸ್ಟಾಲಿನ್ ಅವರಿಗೆ ಪತ್ರ ಬರೆದಿರುವ ಅವರು, ‘ಮೊದಲ ಮೂರು ಸುತ್ತುಗಳಲ್ಲಿ ರಾಜ್ಯದ ಪ್ರಸ್ತಾವನೆಯನ್ನು ಪರಿಗಣಿಸಲಾಗಿತ್ತು’ ಎಂದು ವಿವರಿಸಿದ್ದಾರೆ.</p>.<p>‘ಆಯಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವವರನ್ನು ಒಳಗೊಂಡ ಸಮಿತಿ ಸರಣಿ ಸಭೆಗಳನ್ನು ನಡೆಸುತ್ತದೆ. ಸ್ತಬ್ಧಚಿತ್ರದ ಪರಿಕಲ್ಪನೆ, ವಿನ್ಯಾಸ ಮತ್ತಿತರ ಅಂಶಗಳ ಆಧಾರದ ಮೇಲೆ ಸಮಿತಿಯು ರಾಜ್ಯಗಳು ಸಲ್ಲಿಸುವ ಪ್ರಸ್ತಾವನೆಗಳನ್ನು ಪರಿಶೀಲಿಸಿ, ಶಿಫಾರಸು ಮಾಡುತ್ತದೆ’ ಎಂದೂ ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>ಇದೇ ವಿಷಯವಾಗಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೂ ಸಚಿವ ರಾಜನಾಥ್ ಸಿಂಗ್ ಪತ್ರ ಬರೆದು, ಆ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗದಿರುವ ಕುರಿತು ವಿವರಿಸಿದ್ದಾರೆ.</p>.<p>‘ನೇತಾಜಿ ಸುಭಾಶ್ಚಂದ್ರ ಬೋಸ್ ಕುರಿತ ಸ್ತಬ್ಧಚಿತ್ರವನ್ನು ಕೇಂದ್ರೀಯ ಲೋಕೋಪಯೋಗಿ ಇಲಾಖೆ ಸಲ್ಲಿಸಿತ್ತು. ಹೀಗಾಗಿ ನೇತಾಜಿ ಅವರಿಗೆ ಸಂಬಂಧಿಸಿದ್ದ ಸ್ತಬ್ಧಚಿತ್ರ ಒಳಗೊಂಡಿದ್ದ ಪಶ್ಚಿಮ ಬಂಗಾಳದ ಪ್ರಸ್ತಾವನೆಯನ್ನು ಪರೇಡ್ಗೆ ಪರಿಗಣಿಸಲಿಲ್ಲ’ ಎಂದು ಪತ್ರದಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>