ಲಾಕ್ಡೌನ್ ಅವಧಿಯಲ್ಲಿ ಕಾರ್ಮಿಕರ ವಲಸೆ ಆರಂಭವಾಗಿದ್ದು, ಆ ವೇಳೆಯಲ್ಲಿ ತಮ್ಮ ತಮ್ಮ ರಾಜ್ಯದಲ್ಲಿರುವ ವಲಸೆ ಕಾರ್ಮಿಕರ ಮಕ್ಕಳಿಗೆ ಅಗತ್ಯವಾದ ಊಟ ಮತ್ತು ವಸತಿ ನೀಡುವಂತೆ ಆಯಾ ಸರ್ಕಾರಗಳಿಗೆ ಆಯೋಗ ಸೂಚನೆ ನೀಡಿತ್ತು. ಮಾರ್ಚ್ ತಿಂಗಳಲ್ಲಿ ಲಾಕ್ಡೌನ್ ಘೋಷಣೆಯಾದ ನಂತರ ಕಾರ್ಮಿಕ ಮಕ್ಕಳಿಗೆ ದಿನಸಿ ಮತ್ತು ಹಾಲು ಪೂರೈಸುವ ಮೂಲಕ ಅವರ ಹಕ್ಕುಗಳನ್ನು ರಕ್ಷಿಸಲಾಯಿತು’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.