ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಬಿ.ವಿ.ನಾಗರತ್ನ ಅವರಿದ್ದ ದ್ವಿಸದಸ್ಯ ನ್ಯಾಯಪೀಠವು, ‘ಶಾಲೆಯ ಭೂಮಿಯನ್ನು ಮಾರುಕಟ್ಟೆಯ ಬೆಲೆಗೆ ಅತಿಕ್ರಮಣದಾರರಿಗೆ ಮಾರಾಟ ಮಾಡಿ ಭೂಮಿಯನ್ನು ಸಕ್ರಮ ಮಾಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ 2016ರಲ್ಲಿ ಆದೇಶ ನೀಡಿರುವುದು ‘ಗಂಭೀರವಾದ ತಪ್ಪು’ ಎಂದು ಅಭಿಪ್ರಾಯಪಟ್ಟಿದೆ.