<p><strong>ನವದೆಹಲಿ: </strong>ಮೇಕೆದಾಟು ಯೋಜನೆ ಕುರಿತಂತೆ ಕರ್ನಾಟಕ ಸರ್ಕಾರದೊಂದಿಗಿನ ಯಾವುದೇ ಮಾತುಕತೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ತಳ್ಳಿ ಹಾಕಿದ್ದಾರೆ.</p>.<p>ಈ ಯೋಜನೆಯನ್ನು ಮುಂದುವರಿಸಲು ಕರ್ನಾಟಕಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಜಲಶಕ್ತಿ ಸಚಿವರು ತಮಿಳುನಾಡಿಗೆ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>‘ಮಾತುಕತೆಗೆ ಯಾವುದೇ ಮಹತ್ವವಿಲ್ಲ (ಕರ್ನಾಟಕದ ಜೊತೆ). ನಮ್ಮ ಜಲಸಂಪನ್ಮೂಲ ಸಚಿವರು ಮಾತುಕತೆ ಕುರಿತಂತೆ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ,’ ಎಂದು ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಟಾಲಿನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.</p>.<p>ಯೋಜನೆ ಬಗ್ಗೆ ಯಾವುದೇ ಅನುಮಾನಗಳಿದ್ದರೆ ಅದನ್ನು ಪರಿಹರಿಸುವ ಉದ್ದೇಶದಿಂದ ಸಭೆ ನಡೆಸುವ ಕುರಿತಂತೆ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಬರೆದಿದ್ದ ಪತ್ರದ ಬೆನ್ನಲ್ಲೇ ಸ್ಟಾಲಿನ್ ಈ ಹೇಳಿಕೆ ನೀಡಿದ್ದಾರೆ.</p>.<p>ಮೇಕೆದಾಟುವಿನಲ್ಲಿ ಜಲಾಶಯವನ್ನು ನಿರ್ಮಿಸುವ ಕರ್ನಾಟಕದ ಯೋಜನೆಯನ್ನು ವಿರೋಧಿಸಲು ತಮಿಳುನಾಡು, ಕೇರಳ ಮತ್ತು ಪುದುಚೇರಿಯ ಮುಖ್ಯಮಂತ್ರಿಗಳ ಜಂಟಿ ಕಾರ್ಯತಂತ್ರದ ಅಗತ್ಯವಿಲ್ಲ ಎಂದೂ ಅವರು ಹೇಳಿದ್ದಾರೆ.</p>.<p>‘ಪ್ರಧಾನ ಮಂತ್ರಿ ನಮಗೆ (ಮೇಕೆಡಾಟು ಕುರಿತು) ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲ, ಜಲಶಕ್ತಿ ಸಚಿವರಿಂದಲೂ ಸಹ ನಮಗೆ ಭರವಸೆ ಸಿಕ್ಕಿದೆ (ಯೋಜನೆ ಕಾರ್ಯಗತವಾಗುವುದಿಲ್ಲ). ನಮಗೆ ಈ ಬಗ್ಗೆ ಭರವಸೆ ಇದೆ. ಮೇಲಾಗಿ, ಈ ವಿಷಯವು ಸುಪ್ರೀಂ ಕೋರ್ಟ್ ಮುಂದೆ ಇದೆ. ನಾವು ಈ ಸಮಸ್ಯೆಯನ್ನು ಕಾನೂನಿನ ಮೂಲಕ ಎದುರಿಸುತ್ತೇವೆ, ’ ಎಂದು ಸ್ಟಾಲಿನ್ ಹೇಳಿದ್ದಾರೆ.</p>.<p>ಇದನ್ನೂ ಓದಿ..<strong> <a href="https://www.prajavani.net/india-news/tn-all-party-meeting-opposes-mekedatu-asks-centre-to-reject-the-project-847486.html">ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡಿನಲ್ಲಿ 13 ಪಕ್ಷಗಳ ಸರ್ವಾನುಮತದ ನಿರ್ಣಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮೇಕೆದಾಟು ಯೋಜನೆ ಕುರಿತಂತೆ ಕರ್ನಾಟಕ ಸರ್ಕಾರದೊಂದಿಗಿನ ಯಾವುದೇ ಮಾತುಕತೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ತಳ್ಳಿ ಹಾಕಿದ್ದಾರೆ.</p>.<p>ಈ ಯೋಜನೆಯನ್ನು ಮುಂದುವರಿಸಲು ಕರ್ನಾಟಕಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಜಲಶಕ್ತಿ ಸಚಿವರು ತಮಿಳುನಾಡಿಗೆ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>‘ಮಾತುಕತೆಗೆ ಯಾವುದೇ ಮಹತ್ವವಿಲ್ಲ (ಕರ್ನಾಟಕದ ಜೊತೆ). ನಮ್ಮ ಜಲಸಂಪನ್ಮೂಲ ಸಚಿವರು ಮಾತುಕತೆ ಕುರಿತಂತೆ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ,’ ಎಂದು ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಟಾಲಿನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.</p>.<p>ಯೋಜನೆ ಬಗ್ಗೆ ಯಾವುದೇ ಅನುಮಾನಗಳಿದ್ದರೆ ಅದನ್ನು ಪರಿಹರಿಸುವ ಉದ್ದೇಶದಿಂದ ಸಭೆ ನಡೆಸುವ ಕುರಿತಂತೆ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಬರೆದಿದ್ದ ಪತ್ರದ ಬೆನ್ನಲ್ಲೇ ಸ್ಟಾಲಿನ್ ಈ ಹೇಳಿಕೆ ನೀಡಿದ್ದಾರೆ.</p>.<p>ಮೇಕೆದಾಟುವಿನಲ್ಲಿ ಜಲಾಶಯವನ್ನು ನಿರ್ಮಿಸುವ ಕರ್ನಾಟಕದ ಯೋಜನೆಯನ್ನು ವಿರೋಧಿಸಲು ತಮಿಳುನಾಡು, ಕೇರಳ ಮತ್ತು ಪುದುಚೇರಿಯ ಮುಖ್ಯಮಂತ್ರಿಗಳ ಜಂಟಿ ಕಾರ್ಯತಂತ್ರದ ಅಗತ್ಯವಿಲ್ಲ ಎಂದೂ ಅವರು ಹೇಳಿದ್ದಾರೆ.</p>.<p>‘ಪ್ರಧಾನ ಮಂತ್ರಿ ನಮಗೆ (ಮೇಕೆಡಾಟು ಕುರಿತು) ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲ, ಜಲಶಕ್ತಿ ಸಚಿವರಿಂದಲೂ ಸಹ ನಮಗೆ ಭರವಸೆ ಸಿಕ್ಕಿದೆ (ಯೋಜನೆ ಕಾರ್ಯಗತವಾಗುವುದಿಲ್ಲ). ನಮಗೆ ಈ ಬಗ್ಗೆ ಭರವಸೆ ಇದೆ. ಮೇಲಾಗಿ, ಈ ವಿಷಯವು ಸುಪ್ರೀಂ ಕೋರ್ಟ್ ಮುಂದೆ ಇದೆ. ನಾವು ಈ ಸಮಸ್ಯೆಯನ್ನು ಕಾನೂನಿನ ಮೂಲಕ ಎದುರಿಸುತ್ತೇವೆ, ’ ಎಂದು ಸ್ಟಾಲಿನ್ ಹೇಳಿದ್ದಾರೆ.</p>.<p>ಇದನ್ನೂ ಓದಿ..<strong> <a href="https://www.prajavani.net/india-news/tn-all-party-meeting-opposes-mekedatu-asks-centre-to-reject-the-project-847486.html">ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡಿನಲ್ಲಿ 13 ಪಕ್ಷಗಳ ಸರ್ವಾನುಮತದ ನಿರ್ಣಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>