<p class="title"><strong>ನವದೆಹಲಿ</strong>: ದೆಹಲಿಯಲ್ಲಿ ರೈಲ್ವೆ ಹಳಿಗೆ ಹೊಂದಿಕೊಂಡಂತೆ 140 ಕಿ.ಮೀ ಅಂತರದಲ್ಲಿ ಇರುವ ಕೊಳೆಗೇರಿಗಳನ್ನುಅಂತಿಮ ತೀರ್ಮಾನ ಕೈಗೊಳ್ಳುವವರೆಗೆ ತೆರವು ಮಾಡುವುದಿಲ್ಲ ಎಂದು ಕೇಂದ್ರ ತಿಳಿಸಿದೆ.</p>.<p class="title">ಸುಪ್ರೀಂ ಕೋರ್ಟ್ಗೆ ಸೋಮವಾರಈ ಮಾಹಿತಿ ನೀಡಿದೆ. ಈ ಮುನ್ನಆ.31ರಂದು ಕೋರ್ಟ್ ಸುಮಾರು 48,000 ಕೊಳೆಗೇರಿಗಳನ್ನು ತೆರವುಗೊಳಿಸಬೇಕು ಎಂದು ರೈಲ್ವೆ ಇಲಾಖೆಗೆ ನಿರ್ದೇಶನ ನೀಡಿತ್ತು.</p>.<p class="title">ರೈಲ್ವೆ ಇಲಾಖೆ, ದೆಹಲಿ ಸರ್ಕಾರ ಮತ್ತು ನಗರಾಭಿವೃದ್ಧಿ ಸಚಿವಾಲಯದ ಜೊತೆಗೆ ಚರ್ಚಿಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ನ್ಯಾಯಪೀಠಕ್ಕೆ ತಿಳಿಸಿದರು.</p>.<p class="title">ಈ ಹೇಳಿಕೆ ದಾಖಲಿಸಿಕೊಂಡ ಪೀಠ ನಾಲ್ಕು ವಾರಗಳ ಕಾಲಾವಕಾಶ ನೀಡಿತು. ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ಬಾಲಸುಬ್ರಹ್ಮಣಿಯನ್ ಪೀಠದ ಇತರ ಸದಸ್ಯರು.</p>.<p>ಈ ಕುರಿತು ಅರ್ಜಿ ಸಲ್ಲಿಸಿದ್ದ ಕಾಂಗ್ರೆಸ್ ನಾಯಕ ಅಜಯ್ ಮಕೆನ್ ಅವರು, ಕೊಳೆಗೇರಿಗಳ ತೆರವಿಗೆ ಮುನ್ನ ನಿವಾಸಿಗಳಿಗೆ ಅಗತ್ಯ ಪುನರ್ವಸತಿ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು. ಮಕೇನ್ ಪರವಾಗಿ ಹಾಜರಿದ್ದ ಹಿರಿಯ ವಕೀಲ ಎ.ಎಂ.ಸಿಂಘ್ವಿ, ‘ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸಬೇಕು’ ಎಂದು ಕೋರಿದರು.</p>.<p>ಆದರೆ, ನ್ಯಾಯಪೀಠ ‘ನಾವು ಯಥಾಸ್ಥಿತಿಗೆ ನಿರ್ದೇಶನ ನೀಡುತ್ತಿಲ್ಲ. ಸಾಲಿಸಿಟರ್ ಜನರಲ್ ಅವರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ವಿಚಾರಣೆಯನ್ನು ನಾಲ್ಕು ವಾರಗಳಿಗೆ ಮುಂದೂಡಲಾಗಿದೆ’ ಎಂದು ತಿಳಿಸಿದರು.</p>.<p>ಸಿಂಘ್ವಿ ಅವರು ಇದೇ ಸಂದರ್ಭದಲ್ಲಿ ಸೆ. 11 ಮತ್ತು ಇಂದು ಕೆಲ ಕೊಳೆಗೇರಿಗಳನ್ನು ತೆರವು ಮಾಡಿಸಲಾಗಿದೆ ಎಂದೂ ಪೀಠದ ಗಮನಕ್ಕೆ ತಂದರು. ಇದಕ್ಕೆ ಸಾಲಿಸಿಟರ್ ಜನರಲ್ ಅವರು, ‘ಮತ್ತೊಂದು ಆದೇಶಕ್ಕೆ ಅನ್ವಯಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಆದೇಶದ ಅನುಸಾರ ಅಲ್ಲ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ದೆಹಲಿಯಲ್ಲಿ ರೈಲ್ವೆ ಹಳಿಗೆ ಹೊಂದಿಕೊಂಡಂತೆ 140 ಕಿ.ಮೀ ಅಂತರದಲ್ಲಿ ಇರುವ ಕೊಳೆಗೇರಿಗಳನ್ನುಅಂತಿಮ ತೀರ್ಮಾನ ಕೈಗೊಳ್ಳುವವರೆಗೆ ತೆರವು ಮಾಡುವುದಿಲ್ಲ ಎಂದು ಕೇಂದ್ರ ತಿಳಿಸಿದೆ.</p>.<p class="title">ಸುಪ್ರೀಂ ಕೋರ್ಟ್ಗೆ ಸೋಮವಾರಈ ಮಾಹಿತಿ ನೀಡಿದೆ. ಈ ಮುನ್ನಆ.31ರಂದು ಕೋರ್ಟ್ ಸುಮಾರು 48,000 ಕೊಳೆಗೇರಿಗಳನ್ನು ತೆರವುಗೊಳಿಸಬೇಕು ಎಂದು ರೈಲ್ವೆ ಇಲಾಖೆಗೆ ನಿರ್ದೇಶನ ನೀಡಿತ್ತು.</p>.<p class="title">ರೈಲ್ವೆ ಇಲಾಖೆ, ದೆಹಲಿ ಸರ್ಕಾರ ಮತ್ತು ನಗರಾಭಿವೃದ್ಧಿ ಸಚಿವಾಲಯದ ಜೊತೆಗೆ ಚರ್ಚಿಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ನ್ಯಾಯಪೀಠಕ್ಕೆ ತಿಳಿಸಿದರು.</p>.<p class="title">ಈ ಹೇಳಿಕೆ ದಾಖಲಿಸಿಕೊಂಡ ಪೀಠ ನಾಲ್ಕು ವಾರಗಳ ಕಾಲಾವಕಾಶ ನೀಡಿತು. ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ಬಾಲಸುಬ್ರಹ್ಮಣಿಯನ್ ಪೀಠದ ಇತರ ಸದಸ್ಯರು.</p>.<p>ಈ ಕುರಿತು ಅರ್ಜಿ ಸಲ್ಲಿಸಿದ್ದ ಕಾಂಗ್ರೆಸ್ ನಾಯಕ ಅಜಯ್ ಮಕೆನ್ ಅವರು, ಕೊಳೆಗೇರಿಗಳ ತೆರವಿಗೆ ಮುನ್ನ ನಿವಾಸಿಗಳಿಗೆ ಅಗತ್ಯ ಪುನರ್ವಸತಿ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು. ಮಕೇನ್ ಪರವಾಗಿ ಹಾಜರಿದ್ದ ಹಿರಿಯ ವಕೀಲ ಎ.ಎಂ.ಸಿಂಘ್ವಿ, ‘ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸಬೇಕು’ ಎಂದು ಕೋರಿದರು.</p>.<p>ಆದರೆ, ನ್ಯಾಯಪೀಠ ‘ನಾವು ಯಥಾಸ್ಥಿತಿಗೆ ನಿರ್ದೇಶನ ನೀಡುತ್ತಿಲ್ಲ. ಸಾಲಿಸಿಟರ್ ಜನರಲ್ ಅವರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ವಿಚಾರಣೆಯನ್ನು ನಾಲ್ಕು ವಾರಗಳಿಗೆ ಮುಂದೂಡಲಾಗಿದೆ’ ಎಂದು ತಿಳಿಸಿದರು.</p>.<p>ಸಿಂಘ್ವಿ ಅವರು ಇದೇ ಸಂದರ್ಭದಲ್ಲಿ ಸೆ. 11 ಮತ್ತು ಇಂದು ಕೆಲ ಕೊಳೆಗೇರಿಗಳನ್ನು ತೆರವು ಮಾಡಿಸಲಾಗಿದೆ ಎಂದೂ ಪೀಠದ ಗಮನಕ್ಕೆ ತಂದರು. ಇದಕ್ಕೆ ಸಾಲಿಸಿಟರ್ ಜನರಲ್ ಅವರು, ‘ಮತ್ತೊಂದು ಆದೇಶಕ್ಕೆ ಅನ್ವಯಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಆದೇಶದ ಅನುಸಾರ ಅಲ್ಲ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>