ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲಿಸಾ ಪಠಣ ಮಾಡುವುದಾಗಿ ಹೇಳಿದ್ದ ದಂಪತಿ ಘೋಷಣೆಯು, ಹಿಂಸಾಚಾರ ಮೂಲಕ ಸರ್ಕಾರವನ್ನು ಪತನಗೊಳಿಸುವ ಉದ್ದೇಶದ್ದಾಗಿರಲಿಲ್ಲ. ಆದಾಗ್ಯೂ, ಅವರ ಹೇಳಿಕೆಗಳು ಆಕ್ಷೇಪಾರ್ಹವಾದವು. ಅಷ್ಟಕ್ಕೇ ಅವರನ್ನು ದೇಶದ್ರೋಹದ ಪ್ರಕರಣದ ವ್ಯಾಪ್ತಿಗೆ ತರಲು ಆಗದು ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಆರ್.ಎನ್. ರೊಕಾಡೆ ಅವರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.