ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಣಾ ದಂಪತಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಷ್ಟು ಆಧಾರ ಇಲ್ಲ: ಕೋರ್ಟ್‌

Last Updated 6 ಮೇ 2022, 11:35 IST
ಅಕ್ಷರ ಗಾತ್ರ

ಮುಂಬೈ(ಪಿಟಿಐ): 'ಸಂಸದೆ ನವನೀತ್ ಕೌರ್ ಮತ್ತು ಅವರ ಪತಿ ರವಿ ರಾಣಾ ಅವರು ವಾಕ್ ಸ್ವಾತಂತ್ರ್ಯದ ಗೆರೆಯನ್ನು ದಾಟಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಗಳ ಆಧಾರದ ಮೇಲೆಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ಆಗುವುದಿಲ್ಲ' ಎಂದು ದಂಪತಿಗೆ ಜಾಮೀನು ನೀಡಿದ ಸಂದರ್ಭದಲ್ಲಿ ವಿಶೇಷ ನ್ಯಾಯಾಲಯ ಹೇಳಿದೆ.

ದೇಶದ್ರೋಹದ ಪ್ರಕರಣದಲ್ಲಿ ಒಂದು ವಾರಕ್ಕಿಂತ ಹೆಚ್ಚು ಕಾಲ ಸೆರೆವಾಸದಲ್ಲಿದ್ದ ನವನೀತ್ ಕೌರ್ ಮತ್ತು ಅವರ ಪತಿ ರವಿ ರಾಣಾ ಅವರಿಗೆ ಬುಧವಾರ ಜಾಮೀನು ದೊರಕಿತ್ತು. ಈ ಜಾಮೀನಿನ ಆದೇಶದ ಸಾರಾಂಶವು ಶುಕ್ರವಾರ ಬಿಡುಗಡೆಯಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲಿಸಾ ಪಠಣ ಮಾಡುವುದಾಗಿ ಹೇಳಿದ್ದ ದಂಪತಿ ಘೋಷಣೆಯು, ಹಿಂಸಾಚಾರ ಮೂಲಕ ಸರ್ಕಾರವನ್ನು ಪತನಗೊಳಿಸುವ ಉದ್ದೇಶದ್ದಾಗಿರಲಿಲ್ಲ. ಆದಾಗ್ಯೂ, ಅವರ ಹೇಳಿಕೆಗಳು ಆಕ್ಷೇಪಾರ್ಹವಾದವು. ಅಷ್ಟಕ್ಕೇ ಅವರನ್ನು ದೇಶದ್ರೋಹದ ಪ್ರಕರಣದ ವ್ಯಾಪ್ತಿಗೆ ತರಲು ಆಗದು ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಆರ್.ಎನ್. ರೊಕಾಡೆ ಅವರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT