ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂಬ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅಬ್ದುಲ್ಲಾ, 'ದೇಶದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ದೇಶದಲ್ಲಿ ಧಾರ್ಮಿಕ ಸಹಿಷ್ಣುತೆ ಇರುವುದರಿಂದ ಮುಸ್ಲಿಮರ ಸಾರ್ವಜನಿಕ ಪ್ರಾರ್ಥನೆಗಳಿಗೆ ಅವಕಾಶ ನೀಡಲೇಬೇಕು' ಎಂದು ಅವರು ಹೇಳಿದರು.