ಎಂಸಿಡಿಯ ಮುಂದಿನ ಸಭೆಯಲ್ಲೇ ಮೇಯರ್ ಆಯ್ಕೆಗಾಗಿ ಚುನಾವಣೆ ನಡೆಸಬೇಕು ಮತ್ತು ಮೇಯರ್ ಆಯ್ಕೆ ನಡೆದ ಬಳಿಕ ಉಪಮೇಯರ್ ಆಯ್ಕೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಜೆ.ಬಿ. ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು ನಿರ್ದೇಶನ ನೀಡಿದೆ.