ಆಹಾರ, ವಸ್ತ್ರ, ನಂಬಿಕೆ, ಹಬ್ಬ ಮತ್ತು ಭಾಷೆ ಮುಂತಾದ ವಿಚಾರಗಳನ್ನು ಸಮಾಜವನ್ನು ದ್ರುವೀಕರಿಸಲು ಸರ್ಕಾರಗಳು ಬಳಸುತ್ತಿರುವುದರ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಜಂಟಿ ಹೇಳಿಕೆಯಲ್ಲಿ ಆತಂಕ ವ್ಯಕ್ತಪಡಿಸಿದ್ದರು. ಜೊತೆಗೆ, ಕೋಮು ಗಲಭೆ ಹುಟ್ಟುಹಾಕುವವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದರು.