ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಗಾಸಸ್‌ | ಅಸಹಕಾರವೇ ಅಪರಾಧಕ್ಕೆ ಸಾಕ್ಷಿ: ಕೇಂದ್ರದ ವಿರುದ್ಧ ಸಿಬಲ್‌ ವಾಗ್ದಾಳಿ

Last Updated 26 ಆಗಸ್ಟ್ 2022, 14:13 IST
ಅಕ್ಷರ ಗಾತ್ರ

ನವದೆಹಲಿ:ಇಸ್ರೇಲ್‌ನ ಪೆಗಾಸಸ್‌ ಕುತಂತ್ರಾಂಶದ ಕಾನೂನು ಬಾಹಿರ ಬಳಕೆ ಕುರಿತ ತನಿಖೆಗೆ ಕೇಂದ್ರ ಸರ್ಕಾರ ಸಹಕಾರ ನೀಡಿಲ್ಲ ಎಂದ ಸುಪ್ರೀಂಕೋರ್ಟ್‌ ರಚಿಸಿದ ಸಮಿತಿಯ ವರದಿಗೆ ಸಂಬಂಧಿಸಿದಂತೆ ರಾಜ್ಯಸಭಾ ಸಂಸದ ಕಪಿಲ್‌ ಸಿಬಲ್‌ ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

‘ತನಿಖೆಗೆ ಸಹಕಾರ ನೀಡಲುಸರ್ಕಾರ ನಿರಾಕರಿಸಿದೆ. ಪರೀಕ್ಷೆಗಾಗಿ ತಾಂತ್ರಿಕ ಸಮಿತಿಗೆ ಒದಗಿಸಲಾಗಿದ್ದ 29 ಮೊಬೈಲ್‌ಗಳ ಪೈಕಿ ಐದು ಮೊಬೈಲ್‌ಗಳಲ್ಲಿ ಒಂದು ಬಗೆಯ ಕುತಂತ್ರಾಂಶ ಪತ್ತೆಯಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ‘ಅಸಹಕಾರ’ವೇಅಪರಾಧದ ಸಾಕ್ಷಿ. ಇದು ಸರ್ಕಾರ ಶುದ್ಧವಾಗಲು ಸಕಾಲ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಪೆಗಾಸಸ್‌ ಬಳಸಿ ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರು ಹಾಗೂ ಇತರರ ಮೇಲೆ ಬೇಹುಗಾರಿಕೆ ನಡೆಸಿರುವ ಆರೋಪ ಕೇಳಿಬಂದಿತ್ತು. ಕಳೆದ ವರ್ಷ ಸುಪ್ರೀಂಕೋರ್ಟ್‌ ಪ್ರಕರಣದ ತನಿಖೆಗೆ ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT