<p><strong>ನವದೆಹಲಿ:</strong> ಚರಂಡಿ ಸ್ವಚ್ಛಗೊಳಿಸುವ ಸಾವಿರಕ್ಕೂ ಹೆಚ್ಚು ದಲಿತ ಕಾರ್ಮಿಕರಿಗೆ ದೆಹಲಿ ಸರ್ಕಾರ ವೇತನ ಪಾವತಿಸಿಲ್ಲ ಎಂದು ಆರೋಪಿಸಿಭಾರತೀಯ ದಲಿತ ವಾಣಿಜ್ಯ ಹಾಗೂ ಕೈಗಾರಿಕಾ ಮಂಡಳಿ (ಡಿಐಸಿಸಿಐ) ದೂರು ನೀಡಿದೆ.ಈ ಬಗ್ಗೆ ಗಮನ ಹರಿಸುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ದೆಹಲಿಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಸೂಚಿಸಿದ್ದಾರೆ.</p>.<p>ದೆಹಲಿ ಜಲ ಮಂಡಳಿ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಒಳಚರಂಡಿಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರರಿಗೆ ಸರ್ಕಾರವು ₹ 16 ಕೋಟಿ ಹಣ ಪಾವತಿಸಬೇಕಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p>ಈಬಗ್ಗೆ ಬೇಸರ ವ್ಯಕ್ತಪಡಿಸಿರುವ ಸಕ್ಸೇನಾ, ಇದು 'ಗಂಭೀರವಾದ ವಿಚಾರ' ಎಂದಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿದ್ದಾರೆ. ದೀಪಾವಳಿಹಬ್ಬಕ್ಕೂ ಮುನ್ನ ದಲಿತ ಕಾರ್ಮಿಕರ ಸಮಸ್ಯೆ ಬಗೆ ಹರಿಯಬೇಕು. ಹಬ್ಬದ ಸಂದರ್ಭದಲ್ಲಿ ಅವರಿಗೆ ಯಾವುದೇ ತೊಂದರೆ ಆಗಬಾರದು ಎಂದೂ ಸೂಚಿಸಿದ್ದಾರೆ ಎನ್ನಲಾಗಿದೆ.</p>.<p>ಡಿಐಸಿಸಿಐ ಅಧ್ಯಕ್ಷ ಮಿಲಿಂದ್ ಕಾಂಬ್ಳೆ ಅವರುಸೆಪ್ಟೆಂಬರ್ 30ರಂದು ಸಕ್ಸೇನಾ ಅವರನ್ನು ಭೇಟಿಯಾಗಿದ್ದರು. ದಲಿತ ಕಾರ್ಮಿಕರ ವಿಚಾರದಲ್ಲಿ ದೆಹಲಿ ಸರ್ಕಾರವು ಉದಾಸೀನ ಧೋರಣೆ ತಳೆದಿದೆ ಎಂದು ಆರೋಪಿಸಿ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಚರಂಡಿ ಸ್ವಚ್ಛಗೊಳಿಸುವ ಸಾವಿರಕ್ಕೂ ಹೆಚ್ಚು ದಲಿತ ಕಾರ್ಮಿಕರಿಗೆ ದೆಹಲಿ ಸರ್ಕಾರ ವೇತನ ಪಾವತಿಸಿಲ್ಲ ಎಂದು ಆರೋಪಿಸಿಭಾರತೀಯ ದಲಿತ ವಾಣಿಜ್ಯ ಹಾಗೂ ಕೈಗಾರಿಕಾ ಮಂಡಳಿ (ಡಿಐಸಿಸಿಐ) ದೂರು ನೀಡಿದೆ.ಈ ಬಗ್ಗೆ ಗಮನ ಹರಿಸುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ದೆಹಲಿಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಸೂಚಿಸಿದ್ದಾರೆ.</p>.<p>ದೆಹಲಿ ಜಲ ಮಂಡಳಿ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಒಳಚರಂಡಿಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರರಿಗೆ ಸರ್ಕಾರವು ₹ 16 ಕೋಟಿ ಹಣ ಪಾವತಿಸಬೇಕಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p>ಈಬಗ್ಗೆ ಬೇಸರ ವ್ಯಕ್ತಪಡಿಸಿರುವ ಸಕ್ಸೇನಾ, ಇದು 'ಗಂಭೀರವಾದ ವಿಚಾರ' ಎಂದಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿದ್ದಾರೆ. ದೀಪಾವಳಿಹಬ್ಬಕ್ಕೂ ಮುನ್ನ ದಲಿತ ಕಾರ್ಮಿಕರ ಸಮಸ್ಯೆ ಬಗೆ ಹರಿಯಬೇಕು. ಹಬ್ಬದ ಸಂದರ್ಭದಲ್ಲಿ ಅವರಿಗೆ ಯಾವುದೇ ತೊಂದರೆ ಆಗಬಾರದು ಎಂದೂ ಸೂಚಿಸಿದ್ದಾರೆ ಎನ್ನಲಾಗಿದೆ.</p>.<p>ಡಿಐಸಿಸಿಐ ಅಧ್ಯಕ್ಷ ಮಿಲಿಂದ್ ಕಾಂಬ್ಳೆ ಅವರುಸೆಪ್ಟೆಂಬರ್ 30ರಂದು ಸಕ್ಸೇನಾ ಅವರನ್ನು ಭೇಟಿಯಾಗಿದ್ದರು. ದಲಿತ ಕಾರ್ಮಿಕರ ವಿಚಾರದಲ್ಲಿ ದೆಹಲಿ ಸರ್ಕಾರವು ಉದಾಸೀನ ಧೋರಣೆ ತಳೆದಿದೆ ಎಂದು ಆರೋಪಿಸಿ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>