ಶಿಮ್ಲಾ: ವಿಪರೀತವಾಗಿ ಸುರಿಯುತ್ತಿರುವ ಮುಂಗಾರು ಮಳೆಯಿಂದಾಗಿ ಹಿಮಾಲಯದ ತಪ್ಪಲಿನಲ್ಲಿ ಹಠಾತ್ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ಉತ್ತರ ಭಾರತದಲ್ಲಿ ಮಳೆಯಿಂದಾಗಿ ಕನಿಷ್ಠ 15 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಭಾರತದಲ್ಲಿ ಪ್ರವಾಹ ಮತ್ತು ಭೂಕುಸಿತಗಳು ಸಾಮಾನ್ಯವಾಗಿವೆ. ಆದರೆ ಮುಂಗಾರು ಭಾರತದಲ್ಲಿ ವ್ಯಾಪಕ ವಿನಾಶವನ್ನು ಉಂಟುಮಾಡುತ್ತದೆ.
‘ಹವಾಮಾನ ಬದಲಾವಣೆಯಿಂದಾಗಿ ಪ್ರಪಂಚದಾದ್ಯಂತ ಹವಾಮಾನ ವೈಪರೀತ್ಯಗಳ ಸಂಖ್ಯೆ ಹೆಚ್ಚುತ್ತಿವೆ. ಭಾರತದಲ್ಲಿ ಅಣೆಕಟ್ಟು, ಅರಣ್ಯನಾಶ ಮತ್ತು ಅಭಿವೃದ್ಧಿ ಯೋಜನೆಗಳು ಸಮಸ್ಯೆಯನ್ನು ಹೆಚ್ಚಿಸುತ್ತಿವೆ’ಎಂದು ತಜ್ಞರು ಹೇಳುತ್ತಾರೆ.