ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಭಾರತದಲ್ಲಿ ಹೆಚ್ಚಿದ ಶೀತಗಾಳಿ: ರೈಲ್ವೆ ಸಂಚಾರ ವ್ಯತ್ಯಯ

Last Updated 5 ಜನವರಿ 2023, 21:49 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಶೀತಗಾಳಿ ಮತ್ತು ದಟ್ಟವಾದ ಮಂಜು ಹೆಚ್ಚಾಗಿರುವ ಕಾರಣ ರೈಲ್ವೇ ಸಂಚಾರದಲ್ಲಿ ವ್ಯತ್ಯಯವಾಗಿದೆ. ದೆಹಲಿಯಲ್ಲಿ ಮೂರು ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದ್ದು, ಎರಡು ವರ್ಷಗಳಲ್ಲಿ ಜನವರಿಯಲ್ಲಿ ಇದು ಅತ್ಯಂತ ಕನಿಷ್ಠ ತಾಪಮಾನವಾಗಿದೆ.

ದೆಹಲಿಯ ಡಾಲ್‌ಹೌಸಿಯಲ್ಲಿ 4.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಧರ್ಮಶಾಲಾ 5.2 ಡಿಗ್ರಿ ಸೆಲ್ಸಿಯಸ್, ಕಂಗ್ರಾ 3.2, ಶಿಮ್ಲಾ 3.7, ಡೆಹ್ರಾಡೂನ್ 4.6, ಮಸ್ಸೂರಿ 4.4 ಮತ್ತು ನೈನ್‌ಟಾಲ್‌ನಲ್ಲಿ 6.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದರಿಂದಾಗಿ ಎಲ್ಲೆಡೆ ಮಂಜು ಕವಿದಿದ್ದು, ಕನಿಷ್ಠ 12 ರೈಲುಗಳ ಸಂಚಾರದಲ್ಲಿ 1 ರಿಂದ 6ಗಂಟೆಗಳು ವ್ಯತ್ಯಯವಾಗಿದೆ ಎಂದು ಅಧಿಕೃತ ಮೂಲ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 40 ದಿನಗಳ ಕಠಿಣ ಚಳಿಗಾಲದ 'ಚಿಲೈ ಕಲನ್' ನಡೆಯುತ್ತಿರುವುದರಿಂದ ದಾಖಲೆಯ ತಾಪಮಾನ ಕುಸಿತವಾಗಿದ್ದು, ಶ್ರೀನಗರದಲ್ಲಿ ಬುಧವಾರ ರಾತ್ರಿ ಮೈನಸ್‌ 6.4 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ಉತ್ತರ ಭಾರತದಾದ್ಯಂತ ದಟ್ಟವಾದ ಮಂಜು ಆವರಿಸಿದ್ದು, ಮುಂದಿನ ವಾರದಲ್ಲೂ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ರಾಜಸ್ಥಾನದ ಅಲ್ವಾರ್, ಭರತ್‌ಪುರ್, ಧೋಲ್‌ಪುರ್, ಜುಂಜುನು ಮತ್ತು ಕರೌಲಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿ ಮುಂದುವರಿಯುತ್ತಿರುವ ಕಾರಣ ಹವಾಮಾನ ಕಚೇರಿ 'ಆರೆಂಜ್ ಅಲರ್ಟ್' ನೀಡಿದೆ.

ಅಮರನಾಥ ಯಾತ್ರೆಯ ಮೂಲ ಶಿಬಿರ ಇರುವ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನ ಪ್ರವಾಸಿ ತಂಗುದಾಣವು ಕನಿಷ್ಠ ಮೈನಸ್ 9.2 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ.

ಜಾರ್ಖಂಡ್‌ನಲ್ಲಿ ದಟ್ಟವಾದ ಮಂಜು ಹಾಗೂ ಮೋಡ ಕವಿದ ವಾತಾವರಣ ಇದ್ದು, 7–10 ಡಿಗ್ರಿ ಸೆಲ್ಸಿಯಲ್ ತಾಪಮಾನ ಇದೆ. ಇಲ್ಲಿನ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಜನವರಿ 8 ರವರೆಗೆ ಸರ್ಕಾರ ರಜೆ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT