<p><strong>ನವದೆಹಲಿ:</strong> ನಿರ್ದಿಷ್ಟ ಬೆದರಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಧೀಶರು ಮತ್ತು ನ್ಯಾಯಾಲಯ ಸಂಕೀರ್ಣಗಳ ಭದ್ರತೆಗಾಗಿ ರಾಷ್ಟ್ರೀಯ ಮಟ್ಟದ ಭದ್ರತಾ ಪಡೆಯನ್ನು ನಿಯೋಜಿಸುವುದು ಸೂಕ್ತವಲ್ಲ. ಅದರ ಬದಲಿಗೆ ಸ್ಥಳೀಯ ಪೊಲೀಸರೇ ಸಮರ್ಪಕವಾಗಿ ಈ ಕಾರ್ಯ ನಿಭಾಯಿಸಬಲ್ಲರು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಮಂಗಳವಾರ ತಿಳಿಸಿದೆ.</p>.<p>ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಈ ಸಂಬಂಧ ಕೇಂದ್ರ ಸರ್ಕಾರ 2007ರಲ್ಲಿ ಮಾರ್ಗಸೂಚಿ ಹೊರಡಿಸಿದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ನೇತೃತ್ವದ ಪೀಠದ ಗಮನಕ್ಕೆ ತಂದರು.</p>.<p>ಈ ಕಾರ್ಯಕ್ಕಾಗಿ ವಿಶೇಷ ಪೊಲೀಸ್ ಪಡೆಯನ್ನು ನಿಯೋಜಿಸುವ ಬದಲಿಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಗೃಹ ಸಚಿವಾಲಯಗಳು ಕೇಂದ್ರದ ಮಾರ್ಗಸೂಚಿಯನ್ನು ಪೂರ್ಣವಾಗಿ ಅನುಷ್ಠಾನಗೊಳಿಸಿದರೆ ಸಾಕು ಎಂದರು.</p>.<p>ಹಿಮಾಚಲ ಪ್ರದೇಶದಲ್ಲಿ ಎದುರಾಗುವ ಭದ್ರತಾ ಸಮಸ್ಯೆಗಳು ಜಾರ್ಖಂಡ್ಗಿಂತ ಭಿನ್ನವಾಗಿರಬಹುದು. ಆದ್ದರಿಂದ ನ್ಯಾಯಾಧೀಶರ ರಕ್ಷಣಾ ಕಾರ್ಯವನ್ನು ಕೇಂದ್ರದ ಬದಲಿಗೆ ಆಯಾ ರಾಜ್ಯಗಳೇ ನಿಭಾಯಿಸುವುದು ಸೂಕ್ತ ಎಂದು ಅವರು ಹೇಳಿದರು.</p>.<p>ಆರ್ಪಿಎಫ್, ಸಿಎಸ್ಐಎಫ್ ಇತ್ಯಾದಿಗಳಂತೆ ನ್ಯಾಯಾಧೀಶರ ಭದ್ರತೆಗೆ ವಿಶೇಷ ರಾಷ್ಟ್ರೀಯ ಪಡೆಯನ್ನು ನಿಯೋಜಿಸಲು ಸಾಧ್ಯವೇ ಎಂದು ಪೀಠ ಕೇಳಿದ ಪ್ರಶ್ನೆಗೆ ಮೆಹ್ತಾ ಅವರು ಮೇಲ್ಕಂಡಂತೆ ಪ್ರತಿಕ್ರಿಯಿಸಿದರು.</p>.<p>ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಗಳು ಪಾಲನೆ ಆಗುತ್ತಿವೆಯೇ ಅಥವಾ ಇಲ್ಲವೇ ಎಂದು ನ್ಯಾಯಪೀಠ ಇದೇ ವೇಳೆ ಕೇಳಿತು.</p>.<p>ನ್ಯಾಯಾಧೀಶರ ರಕ್ಷಣೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಮಾಣ ಪತ್ರ ಸಲ್ಲಿಸುವಂತೆ ಈ ಹಿಂದೆಯೇ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿತ್ತು. ಆದರೂ ಹಲವು ರಾಜ್ಯಗಳು ಪ್ರತಿಕ್ರಿಯಿಸಿಲ್ಲ ಎಂದು ಪೀಠ ಬೇಸರ ವ್ಯಕ್ತಪಡಿಸಿತು.</p>.<p>ರಾಜ್ಯಗಳಿಗೆ ಈ ಕುರಿತು ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶವನ್ನು ನೀಡಿದ ಪೀಠವು, ಪ್ರತಿಕ್ರಿಯಿಸಲು ವಿಫಲವಾದರೆ ಒಂದು ಲಕ್ಷ ರೂಪಾಯಿ ದಂಡ ಪಾವತಿಸಬೇಕಾಗುತ್ತದೆ ಎಂದು ಎಚ್ಚರಿಸಿತು.</p>.<p>ಧನಬಾದ್ನ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಸಾವಿನ ನಂತರ ಸುಪ್ರೀಂ ಕೋರ್ಟ್, ನ್ಯಾಯಾಧೀಶರ ಭದ್ರತೆಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನಿರ್ದಿಷ್ಟ ಬೆದರಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಧೀಶರು ಮತ್ತು ನ್ಯಾಯಾಲಯ ಸಂಕೀರ್ಣಗಳ ಭದ್ರತೆಗಾಗಿ ರಾಷ್ಟ್ರೀಯ ಮಟ್ಟದ ಭದ್ರತಾ ಪಡೆಯನ್ನು ನಿಯೋಜಿಸುವುದು ಸೂಕ್ತವಲ್ಲ. ಅದರ ಬದಲಿಗೆ ಸ್ಥಳೀಯ ಪೊಲೀಸರೇ ಸಮರ್ಪಕವಾಗಿ ಈ ಕಾರ್ಯ ನಿಭಾಯಿಸಬಲ್ಲರು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಮಂಗಳವಾರ ತಿಳಿಸಿದೆ.</p>.<p>ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಈ ಸಂಬಂಧ ಕೇಂದ್ರ ಸರ್ಕಾರ 2007ರಲ್ಲಿ ಮಾರ್ಗಸೂಚಿ ಹೊರಡಿಸಿದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ನೇತೃತ್ವದ ಪೀಠದ ಗಮನಕ್ಕೆ ತಂದರು.</p>.<p>ಈ ಕಾರ್ಯಕ್ಕಾಗಿ ವಿಶೇಷ ಪೊಲೀಸ್ ಪಡೆಯನ್ನು ನಿಯೋಜಿಸುವ ಬದಲಿಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಗೃಹ ಸಚಿವಾಲಯಗಳು ಕೇಂದ್ರದ ಮಾರ್ಗಸೂಚಿಯನ್ನು ಪೂರ್ಣವಾಗಿ ಅನುಷ್ಠಾನಗೊಳಿಸಿದರೆ ಸಾಕು ಎಂದರು.</p>.<p>ಹಿಮಾಚಲ ಪ್ರದೇಶದಲ್ಲಿ ಎದುರಾಗುವ ಭದ್ರತಾ ಸಮಸ್ಯೆಗಳು ಜಾರ್ಖಂಡ್ಗಿಂತ ಭಿನ್ನವಾಗಿರಬಹುದು. ಆದ್ದರಿಂದ ನ್ಯಾಯಾಧೀಶರ ರಕ್ಷಣಾ ಕಾರ್ಯವನ್ನು ಕೇಂದ್ರದ ಬದಲಿಗೆ ಆಯಾ ರಾಜ್ಯಗಳೇ ನಿಭಾಯಿಸುವುದು ಸೂಕ್ತ ಎಂದು ಅವರು ಹೇಳಿದರು.</p>.<p>ಆರ್ಪಿಎಫ್, ಸಿಎಸ್ಐಎಫ್ ಇತ್ಯಾದಿಗಳಂತೆ ನ್ಯಾಯಾಧೀಶರ ಭದ್ರತೆಗೆ ವಿಶೇಷ ರಾಷ್ಟ್ರೀಯ ಪಡೆಯನ್ನು ನಿಯೋಜಿಸಲು ಸಾಧ್ಯವೇ ಎಂದು ಪೀಠ ಕೇಳಿದ ಪ್ರಶ್ನೆಗೆ ಮೆಹ್ತಾ ಅವರು ಮೇಲ್ಕಂಡಂತೆ ಪ್ರತಿಕ್ರಿಯಿಸಿದರು.</p>.<p>ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಗಳು ಪಾಲನೆ ಆಗುತ್ತಿವೆಯೇ ಅಥವಾ ಇಲ್ಲವೇ ಎಂದು ನ್ಯಾಯಪೀಠ ಇದೇ ವೇಳೆ ಕೇಳಿತು.</p>.<p>ನ್ಯಾಯಾಧೀಶರ ರಕ್ಷಣೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಮಾಣ ಪತ್ರ ಸಲ್ಲಿಸುವಂತೆ ಈ ಹಿಂದೆಯೇ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿತ್ತು. ಆದರೂ ಹಲವು ರಾಜ್ಯಗಳು ಪ್ರತಿಕ್ರಿಯಿಸಿಲ್ಲ ಎಂದು ಪೀಠ ಬೇಸರ ವ್ಯಕ್ತಪಡಿಸಿತು.</p>.<p>ರಾಜ್ಯಗಳಿಗೆ ಈ ಕುರಿತು ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶವನ್ನು ನೀಡಿದ ಪೀಠವು, ಪ್ರತಿಕ್ರಿಯಿಸಲು ವಿಫಲವಾದರೆ ಒಂದು ಲಕ್ಷ ರೂಪಾಯಿ ದಂಡ ಪಾವತಿಸಬೇಕಾಗುತ್ತದೆ ಎಂದು ಎಚ್ಚರಿಸಿತು.</p>.<p>ಧನಬಾದ್ನ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಸಾವಿನ ನಂತರ ಸುಪ್ರೀಂ ಕೋರ್ಟ್, ನ್ಯಾಯಾಧೀಶರ ಭದ್ರತೆಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>