<p>ನವದೆಹಲಿ: ಸರ್ಕಾರವು ನಮ್ಮನ್ನು ಹೆದರಿಸಲು ಯತ್ನಿಸುತ್ತಿದೆ. ಆದರೆ ನಾವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆದರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>‘ಅವರು ಬೇಕಾದದ್ದು ಮಾಡಲಿ. ದೇಶ, ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಸಾಮರಸ್ಯವನ್ನು ಕಾಪಾಡಲು ಏನು ಮಾಡಬೇಕೋ ಅದನ್ನೆಲ್ಲಾ ನಾವು ಮಾಡುತ್ತೇವೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.<br /><br />****</p>.<p>ಸಂಸತ್ ಅಧಿವೇಶನದ ಮಧ್ಯೆಯೇ ಖರ್ಗೆ ಅವರಿಗೆ ಸಮನ್ಸ್ ನೀಡಲಾಗಿದೆ. ಈ ಮೂಲಕ ‘ಮೋದಿಶಾಹಿ’ಯು ಇನ್ನಷ್ಟು ಕೆಳಮಟ್ಟಕ್ಕೆ ಇಳಿದಿದೆ</p>.<p>-ಜೈರಾಮ್ ರಮೇಶ್, ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮುಖ್ಯ ಸಚೇತಕ</p>.<p>–––</p>.<p>ತಪ್ಪು ಮಾಡಿದವರು ಯಾರೇ ಆಗಿದ್ದರೂ ಅವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಕಾಂಗ್ರೆಸ್ ನಾಯಕರು ಪಲಾಯನದ ಬದಲು ಕಾನೂನನ್ನು ಪಾಲಿಸಲಿ</p>.<p>- ಪೀಯೂಷ್ ಗೋಯಲ್, ಕೇಂದ್ರ ಸಚಿವ</p>.<p>–––</p>.<p>ನಾನೇನು ಕಾನೂನಿನಿಂದ ದೂರ ಓಡುತ್ತಿಲ್ಲ. ಮಧ್ಯಾಹ್ನ 12.30ಕ್ಕೆ ಇ.ಡಿ ಮುಂದೆ ಹಾಜರಾಗುತ್ತಿದ್ದೇನೆ. ನಮ್ಮನ್ನು ಬೆದರಿಸಲು ಯತ್ನಿಸಲಾಗುತ್ತಿದೆ. ಆದರೆ, ನಾವು ಬಗ್ಗುವವರಲ್ಲ</p>.<p>-ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ನವದೆಹಲಿ: ಸರ್ಕಾರವು ನಮ್ಮನ್ನು ಹೆದರಿಸಲು ಯತ್ನಿಸುತ್ತಿದೆ. ಆದರೆ ನಾವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆದರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>‘ಅವರು ಬೇಕಾದದ್ದು ಮಾಡಲಿ. ದೇಶ, ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಸಾಮರಸ್ಯವನ್ನು ಕಾಪಾಡಲು ಏನು ಮಾಡಬೇಕೋ ಅದನ್ನೆಲ್ಲಾ ನಾವು ಮಾಡುತ್ತೇವೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.<br /><br />****</p>.<p>ಸಂಸತ್ ಅಧಿವೇಶನದ ಮಧ್ಯೆಯೇ ಖರ್ಗೆ ಅವರಿಗೆ ಸಮನ್ಸ್ ನೀಡಲಾಗಿದೆ. ಈ ಮೂಲಕ ‘ಮೋದಿಶಾಹಿ’ಯು ಇನ್ನಷ್ಟು ಕೆಳಮಟ್ಟಕ್ಕೆ ಇಳಿದಿದೆ</p>.<p>-ಜೈರಾಮ್ ರಮೇಶ್, ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮುಖ್ಯ ಸಚೇತಕ</p>.<p>–––</p>.<p>ತಪ್ಪು ಮಾಡಿದವರು ಯಾರೇ ಆಗಿದ್ದರೂ ಅವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಕಾಂಗ್ರೆಸ್ ನಾಯಕರು ಪಲಾಯನದ ಬದಲು ಕಾನೂನನ್ನು ಪಾಲಿಸಲಿ</p>.<p>- ಪೀಯೂಷ್ ಗೋಯಲ್, ಕೇಂದ್ರ ಸಚಿವ</p>.<p>–––</p>.<p>ನಾನೇನು ಕಾನೂನಿನಿಂದ ದೂರ ಓಡುತ್ತಿಲ್ಲ. ಮಧ್ಯಾಹ್ನ 12.30ಕ್ಕೆ ಇ.ಡಿ ಮುಂದೆ ಹಾಜರಾಗುತ್ತಿದ್ದೇನೆ. ನಮ್ಮನ್ನು ಬೆದರಿಸಲು ಯತ್ನಿಸಲಾಗುತ್ತಿದೆ. ಆದರೆ, ನಾವು ಬಗ್ಗುವವರಲ್ಲ</p>.<p>-ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>