ಅಖಿಲೇಶ್ ಯಾದವ್ ಅವರು ನೀಡಿದ್ದ ಹೇಳಿಕೆಗೆ ಬಿಜೆಪಿಯ ನಾಯಕರು ಕೆಂಡಾಮಂಡಲವಾಗಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಸೇರಿದಂತೆ ಹಲವು ನಾಯಕರು ಅಖಿಲೇಶ್ ಯಾದವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.
ಈ ವಿಚಾರವಾಗಿ ಸೋಮವಾರ ಮಾತನಾಡಿರುವ ಅಖಿಲೇಶ್, 'ನಾನು ಅಥವಾ ಸಮಾಜವಾದಿ ಪಕ್ಷವು ವಿಜ್ಞಾನಿಗಳು, ತಜ್ಞರು ಅಥವಾ ಸಂಶೋಧಕರನ್ನು ಪ್ರಶ್ನಿಸಿಲ್ಲ. ನಾವು ಬಿಜೆಪಿಯನ್ನು ಪ್ರಶ್ನಿಸಿದ್ದೇವೆ. ನಮ್ಮ ಕೆಲ ಅನುಮಾನಗಳಿಗೆ ಸ್ಪಷ್ಟನೆ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ' ಎಂದು ಹೇಳಿದ್ದಾರೆ.