<p><strong>ನವದೆಹಲಿ:</strong> 'ರಾಜ್ಯ ಸರ್ಕಾರಕ್ಕೆ ರಾಜಕೀಯವಾಗಿ ತೊಂದರೆ ಉಂಟುಮಾಡುವ ಸಂಘಟನೆಗೆ ಸೇರಿದ ಯಾವುದೇ ವ್ಯಕ್ತಿಯನ್ನು ನಾನು ನೇಮಕ ಮಾಡಿರುವ ಒಂದು ನಿದರ್ಶನ ತೋರಿಸಿದರೆ ರಾಜೀನಾಮೆ ನೀಡಲು ಸಿದ್ಧ' ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ.</p>.<p>ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ, ‘ನಾನು ಆರ್ಎಸ್ಎಸ್ ಕಾರ್ಯಸೂಚಿಯನ್ನು ಅನುಷ್ಠಾನಗೊಳಿಸುತ್ತಿದ್ದೇನೆ ಎನ್ನುತ್ತಿದ್ದೀರಿ. ಆ ಸಂಘಟನೆಗೆ ಸೇರಿದ ಯಾರನ್ನಾದರೂ ನಾನು ವಿಶ್ವವಿದ್ಯಾಲಯಕ್ಕಾಗಲಿ, ಇತರೆಡೆಯಾಗಲಿ ನೇಮಕ ಮಾಡಿದ್ದರೆ ಆ ವ್ಯಕ್ತಿಯ ಹೆಸರು ಹೇಳಲಿ’ ಎಂದೂ ಸವಾಲು ಹಾಕಿದ್ದಾರೆ.</p>.<p>ಸರ್ಕಾರದ ಕಾರ್ಯಚಟುವಟಿಕೆಗಳು ಕಾನೂನಿನ ಪ್ರಕಾರ ನಡೆಯುತ್ತಿವೆಯೇ ಎಂಬುದನ್ನು ನೋಡುವುದು ನನ್ನ ಕೆಲಸ ಎಂದಿರುವ ಅವರು, ಸಾಂವಿಧಾನಿಕ ಹುದ್ದೆಯನ್ನು ರಾಜ್ಯಪಾಲರು ರಾಜಕೀಯ ಉದ್ದೇಶಕ್ಕೆ ಬಳಸುತ್ತಿದ್ದಾರೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ.</p>.<p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಈಚೆಗೆ ಎಲ್ಡಿಎಫ್ ನೇತೃತ್ವದಲ್ಲಿ ರಾಜಭವನಕ್ಕೆ ಪ್ರತಿಭಟನಾ ಮೆರವಣಿಗೆ ನಡೆದಿತ್ತು.</p>.<p>‘ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರ ಕಚೇರಿಯನ್ನು ಕಣಕ್ಕಿಳಿಸಲಾಗಿದೆ’ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಈಚೆಗೆ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ರಾಜ್ಯ ಸರ್ಕಾರಕ್ಕೆ ರಾಜಕೀಯವಾಗಿ ತೊಂದರೆ ಉಂಟುಮಾಡುವ ಸಂಘಟನೆಗೆ ಸೇರಿದ ಯಾವುದೇ ವ್ಯಕ್ತಿಯನ್ನು ನಾನು ನೇಮಕ ಮಾಡಿರುವ ಒಂದು ನಿದರ್ಶನ ತೋರಿಸಿದರೆ ರಾಜೀನಾಮೆ ನೀಡಲು ಸಿದ್ಧ' ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ.</p>.<p>ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ, ‘ನಾನು ಆರ್ಎಸ್ಎಸ್ ಕಾರ್ಯಸೂಚಿಯನ್ನು ಅನುಷ್ಠಾನಗೊಳಿಸುತ್ತಿದ್ದೇನೆ ಎನ್ನುತ್ತಿದ್ದೀರಿ. ಆ ಸಂಘಟನೆಗೆ ಸೇರಿದ ಯಾರನ್ನಾದರೂ ನಾನು ವಿಶ್ವವಿದ್ಯಾಲಯಕ್ಕಾಗಲಿ, ಇತರೆಡೆಯಾಗಲಿ ನೇಮಕ ಮಾಡಿದ್ದರೆ ಆ ವ್ಯಕ್ತಿಯ ಹೆಸರು ಹೇಳಲಿ’ ಎಂದೂ ಸವಾಲು ಹಾಕಿದ್ದಾರೆ.</p>.<p>ಸರ್ಕಾರದ ಕಾರ್ಯಚಟುವಟಿಕೆಗಳು ಕಾನೂನಿನ ಪ್ರಕಾರ ನಡೆಯುತ್ತಿವೆಯೇ ಎಂಬುದನ್ನು ನೋಡುವುದು ನನ್ನ ಕೆಲಸ ಎಂದಿರುವ ಅವರು, ಸಾಂವಿಧಾನಿಕ ಹುದ್ದೆಯನ್ನು ರಾಜ್ಯಪಾಲರು ರಾಜಕೀಯ ಉದ್ದೇಶಕ್ಕೆ ಬಳಸುತ್ತಿದ್ದಾರೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ.</p>.<p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಈಚೆಗೆ ಎಲ್ಡಿಎಫ್ ನೇತೃತ್ವದಲ್ಲಿ ರಾಜಭವನಕ್ಕೆ ಪ್ರತಿಭಟನಾ ಮೆರವಣಿಗೆ ನಡೆದಿತ್ತು.</p>.<p>‘ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರ ಕಚೇರಿಯನ್ನು ಕಣಕ್ಕಿಳಿಸಲಾಗಿದೆ’ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಈಚೆಗೆ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>